ಆ್ಯಪ್ನಗರ

ಸಿಲಿಂಡರ್‌ ಸ್ಫೋಟ: ಗೃಹ ಬಳಕೆ ವಸ್ತುಗಳು ಭಸ್ಮ

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್‌ ಸ್ಫೋಟಗೊಂಡಿದ್ದು, ಗೃಹ ಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ.

Vijaya Karnataka 27 May 2019, 5:00 am
ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮನೆಯೊಂದರಲ್ಲಿ ಅಡುಗೆ ಅನಿಲದ ಸಿಲಿಂಡರ್‌ ಸ್ಫೋಟಗೊಂಡಿದ್ದು, ಗೃಹ ಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ.
Vijaya Karnataka Web CHN-CHN26HNR5


ಗ್ರಾಮದ ಸಾಕಮ್ಮ ಎಂಬುವವರ ಮನೆಯಲ್ಲಿ ಅಡುಗೆ ತಯಾರಿಸುವ ಸಂದರ್ಭದಲ್ಲಿ ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಪ್ರಖರತೆ ಹೆಚ್ಚಾಗಿ ಹೊಗೆ ಬರುತ್ತಿದ್ದುದ್ದನ್ನು ಕಂಡ ಸ್ಥಳೀಯ ಯುವಕರು ಮನೆಯ ಮೇಲೆ ತೆರಳಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಪ್ರಯೋಜನವಾಗಿಲ್ಲ.

ಬೆಂಕಿಯ ಶಾಖಕ್ಕೆ ಸಾಕಮ್ಮ ಅವರ ಮನೆಗೆ ಹೊಂದಿಕೊಂಡಂತೆ ಇದ್ದ ಶಿವಮ್ಮ ಎಂಬುವವರ ಮನೆ ಸಿಲಿಂಡರ್‌ ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಎಲ್ಲರೂ ಮನೆಯ ಹೊರಗಡೆ ಇದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಮಹದೇಶ್ವರ ಬೆಟ್ಟದ ಪೊಲೀಸ್‌ ಠಾಣೆಯ ಸಹಾಯಕ ಸಬ್‌ಇನ್ಸ್‌ಪೆಕ್ಟರ್‌ ಸೀಗನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ