ಆ್ಯಪ್ನಗರ

ಸಮರ್ಪಕವಾಗಿ ಕಾರ್ಯನಿರ್ವಹಿಸಲು ಡಿಸಿ ಸೂಚನೆ

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೇಮಕವಾಗಿರುವ ಸೆಕ್ಟರ್‌ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಸೋಮವಾರ ನಡೆಯಿತು.

Vijaya Karnataka 12 Mar 2019, 5:00 am
ಚಾಮರಾಜನಗರ : ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೇಮಕವಾಗಿರುವ ಸೆಕ್ಟರ್‌ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಸೋಮವಾರ ನಡೆಯಿತು.
Vijaya Karnataka Web CHN-CHN11P3


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಮಾರ್ಗದರ್ಶನದಲ್ಲಿ ಮೈಸೂರು ಜಿಲ್ಲಾ ವ್ಯಾಪ್ತಿಗೆ ಬರುವ ವರುಣ, ತಿ.ನರಸೀಪುರ, ಎಚ್‌.ಡಿ.ಕೋಟೆ ಮತ್ತು ನಂಜನಗೂಡು ಕ್ಷೇತ್ರಗಳು ಚಾಮರಾಜನಗರ ಜಿಲ್ಲೆಯ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವುದರಿಂದ ಸಂಬಂಧಿಸಿದ ವಿಧಾನಸಭೆ ಕ್ಷೇತ್ರಗಳ 70 ಮಂದಿ ಸೆಕ್ಟರ್‌ ಅಧಿಕಾರಿಗಳಿಗಿರುವ ಜವಾಬ್ದಾರಿ ಮತ್ತು ಕೆಲಸಗಳ ಕುರಿತು ತರಬೇತಿ ನೀಡಲಾಯಿತು.

ಜಿಲ್ಲಾಧಿಕಾರಿ ಬಿ.ಬಿ ಕಾವೇರಿ ಅವರು ಮಾತನಾಡಿ, ಚುನಾವಣೆಯು ಶಾಂತಿಯುತ ಮತ್ತು ಪಾರದರ್ಶಕವಾಗಿ ನಡೆಯಲು ಸೆಕ್ಟರ್‌ ಅಧಿಕಾರಿಗಳ ಪಾತ್ರ ಬಹುಮುಖ್ಯ ಹಾಗೂ ಸೆಕ್ಟರ್‌ ಅಧಿಕಾರಿಗಳಿಗೆ ವಿಶೇಷವಾಗಿ ನ್ಯಾಯಿಕ ಅಧಿಕಾರ ಇರುತ್ತದೆ. ಆದ್ದರಿಂದ ಯಾವುದೇ ಹಂತದಲ್ಲೂ ನಿರ್ಲಕ್ಷ ್ಯ ವಹಿಸದೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ಗಣೇಶ್‌ ಮಾತನಾಡಿ, ಚುನಾವಣೆಯಲ್ಲಿ ಸೆಕ್ಟರ್‌ ಅಧಿಕಾರಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಸವಿವರವಾಗಿ ಪವರ್‌ ಪಾಯಿಂಟ್‌ ಮೂಲಕ ತಿಳಿಸಿ ನಂತರ ಸಂವಾದ ನಡೆಸಿದರು.

ತರಬೇತಿ ನೋಡಲ್‌ ಅಧಿಕಾರಿಗಳಾದ ವೃಷಭೇಂದ್ರ ಮಾತನಾಡಿ, ಚುನಾವಣೆಯಲ್ಲಿ ಸೆಕ್ಟರ್‌ ಅಧಿಕಾರಿಗಳು ಭರ್ತಿ ಮಾಡಬೇಕಾದ ಫಾರಂಗಳ ಕುರಿತು ಮಾಹಿತಿ ನೀಡಿದರು. ನಂತರ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ಸಮೀನ್‌ ಅವರು ಇವಿಎಂ ಮತಯಂತ್ರ ಮತ್ತು ವಿವಿ ಪ್ಯಾಟ್‌ ಕುರಿತು ಪ್ರಾತ್ಯಕ್ಷಿಕೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ