ಆ್ಯಪ್ನಗರ

ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಸಕಾಲಕ್ಕೆ ತಲುಪಿಸಿ

ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ನಾನಾ ನಿಗಮಗಳಿಂದ ಫಲಾನುಭವಿಗಳಿಗೆ ಅತಿ ಶೀಘ್ರವಾಗಿ ಬೋರ್‌ ವೆಲ್‌ ಕೊರೆದು ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸವನ್ನು ಶೀಘ್ರ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಸೂಚಿಸಿದರು.

Vijaya Karnataka 29 Nov 2018, 5:00 am
ಚಾಮರಾಜನಗರ : ಜಿಲ್ಲೆಯಲ್ಲಿ ಗಂಗಾಕಲ್ಯಾಣ ಯೋಜನೆಯಡಿ ನಾನಾ ನಿಗಮಗಳಿಂದ ಫಲಾನುಭವಿಗಳಿಗೆ ಅತಿ ಶೀಘ್ರವಾಗಿ ಬೋರ್‌ ವೆಲ್‌ ಕೊರೆದು ವಿದ್ಯುತ್‌ ಸಂಪರ್ಕ ಕಲ್ಪಿಸುವ ಕೆಲಸವನ್ನು ಶೀಘ್ರ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಸೂಚಿಸಿದರು.
Vijaya Karnataka Web deliver the ganga welfare plan facility timely
ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಸಕಾಲಕ್ಕೆ ತಲುಪಿಸಿ


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಾನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಡಾ. ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಗಂಗಾಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಬೋರ್‌ ವೆಲ್‌ ಕೊರೆದು ಬಹಳ ದಿನಗಳಾದರೂ ವಿದ್ಯುತ್‌ ಸಂಪರ್ಕ ಕಲ್ಪಿಸದಿರುವುದು ಪರಿಶೀಲನೆ ವೇಳೆ ಗಮನಿಸಲಾಗಿದೆ. ಇನ್ನುಮುಂದೆ ತ್ವರಿತವಾಗಿ ಬೋರ್‌ ವೆಲ್‌ ಕೊರೆದು ವಿಳಂಬ ಮಾಡದೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾಮಗಾರಿ ನಿರ್ವಹಿಸಿ ಫಲಾನುಭವಿಗಳಿಗೆ ಸಕಾಲಕ್ಕೆ ನೆರವಾಗಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಮಾತನಾಡಿ, ಉಸ್ತುವಾರಿ ಕಾರ್ಯದರ್ಶಿಯವರ ಸೂಚನೆಯಂತೆ ತಹಸೀಲ್ದಾರ್‌, ಇತರೆ ಅಧಿಕಾರಿಗಳ ಜತೆ ಗಂಗಾಕಲ್ಯಾಣ ಯೋಜನೆಯನ್ನು ತಾಲೂಕುವಾರು ಪರಿಶೀಲಿಸಲು ಸೂಚಿಸಲಾಗಿತ್ತು.

ಈ ವೇಳೆ ಬಹುತೇಕ ಭಾಗದಲ್ಲಿ ಇನ್ನು ವಿದ್ಯುದೀಕರಣ ಕೆಲಸ ಬಾಕಿ ಇದೆ ಎಂಬ ವರದಿ ಬಂದಿದೆ. ವಿದ್ಯುತ್‌ ಸಂಪರ್ಕ ಕಲ್ಪಿಸಲು ಇಷ್ಟು ತಡವಾದರೆ ಹೇಗೆ? ಕೂಡಲೇ ಶೀಘ್ರಗತಿಯಲ್ಲಿ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದರು.

ನೀರಿಗೆ ಕೊರತೆಯಾಗಬಾರದು: ಕುಡಿಯುವ ನೀರಿನ ಯೋಜನೆ ಕುರಿತು ಪ್ರಗತಿ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯಲ್ಲಿ ಕುಡಿಯುವ ನೀರು ಯೋಜನೆಗೆ ಆದ್ಯತೆ ನೀಡಬೇಕು. ಮಳೆಯ ಪ್ರಮಾಣ ಕಡಿಮೆಯಾದಲ್ಲಿ ಕುಡಿಯುವ ನೀರಿಗೆ ಯಾವಯಾವ ಗ್ರಾಮಗಳಲ್ಲಿ ಸಮಸ್ಯೆ ಉಂಟಾಗಬಹುದೆಂಬ ಪಟ್ಟಿಯನ್ನು ತಯಾರಿಸಿಕೊಂಡು ಅಂತಹ ಗ್ರಾಮಗಳಿಗೆ ಯಾವುದೇ ಕೊರತೆ ಬಾರದಂತೆ ಮುಂಜಾಗರೂಕತೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಉಸ್ತುವಾರಿ ಕಾರ್ಯದಶಿಗಳು ತಿಳಿಸಿದರು.

ಮಳೆ ಹಾಗೂ ಬೆಳೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆಯುವ ವೇಳೆ ಬಿತ್ತನೆ ಬೀಜ, ರಸಗೊಬ್ಬರಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಾರಿಗೆ ಪ್ರಾಧಿಕಾರದ ಸಭೆಯನ್ನು ನಿಯಮಾನುಸಾರವಾಗಿ ಕರೆಯಬೇಕು. ಬಸ್‌ಗಳಿಗೆ ನೀಡಲಾಗಿರುವ ಪರವಾನಗಿ ಮಾರ್ಗದಲ್ಲಿ ಸಂಚರಿಸುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಸುರಕ್ಷ ತಾ ಕ್ರಮಗಳ ಬಗ್ಗೆಯೂ ಖಾತರಿಪಡಿಸಿಕೊಳ್ಳಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.

ಜನಸ್ಪಂದನ ಸಭೆಯ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡುವಂತಾಗಬೇಕು. ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಿಗೆ ವ್ಯಾಪಕವಾಗಿ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಮೇವು ದಾಸ್ತಾನು, ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುತ್ತಿರುವ ಪಿಂಚಣಿ ವ್ಯವಸ್ಥೆ, ಬೆಳೆ ಸಮೀಕ್ಷೆ ಸೇರಿದಂತೆ ನಾನಾ ಇಲಾಖೆಗಳ ಯೋಜನೆಗಳ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.

ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ