ಆ್ಯಪ್ನಗರ

ರಾಜಕೀಯ ಪಕ್ಷ ಗಳ ಪ್ರತಿನಿಧಿಗಳಿಗೆ ಪ್ರಾತ್ಯಕ್ಷಿಕೆ ತರಬೇತಿ

ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ಮತದಾನ ಖಾತರಿಗೊಳಿಸುವ ವಿವಿ ಪ್ಯಾಟ್‌ ಬಳಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜಿಲ್ಲೆಯ ರಾಜಕೀಯ ಪಕ್ಷ ಗಳ ಪ್ರತಿನಿಧಿಗಳಿಗಾಗಿ ನಡೆಯಿತು.

Vijaya Karnataka 17 Feb 2019, 5:00 am
ಚಾಮರಾಜನಗರ : ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಹಾಗೂ ಮತದಾನ ಖಾತರಿಗೊಳಿಸುವ ವಿವಿ ಪ್ಯಾಟ್‌ ಬಳಕೆ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜಿಲ್ಲೆಯ ರಾಜಕೀಯ ಪಕ್ಷ ಗಳ ಪ್ರತಿನಿಧಿಗಳಿಗಾಗಿ ನಡೆಯಿತು.
Vijaya Karnataka Web demonstration training for delegates of political parties
ರಾಜಕೀಯ ಪಕ್ಷ ಗಳ ಪ್ರತಿನಿಧಿಗಳಿಗೆ ಪ್ರಾತ್ಯಕ್ಷಿಕೆ ತರಬೇತಿ


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅವರ ಸಮ್ಮುಖದಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು.

ಈ ಸಂದರ್ಭ ಜಿಲ್ಲಾಧಿಕಾರಿ ಬಿಬಿ.ಕಾವೇರಿ ಅವರು ಮಾತನಾಡಿ, ''ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ ಹಾಗೂ ಮತದಾನವನ್ನು ಮತದಾರ ಖಚಿತಪಡಿಸಿಕೊಳ್ಳುವ ವಿವಿ ಪ್ಯಾಟ್‌ನ್ನು ಬಳಕೆಮಾಡಲಾಗುತ್ತದೆ. ಇದನ್ನು ಉಪಯೋಗಿಸಲು ಜನರಿಗೆ ಜಾಗೃತಿ ಮೂಡಿಸಲು ವ್ಯಾಪಕವಾಗಿ ಕಾರ್ಯಕ್ರಮ ನಡೆಸಲಾಗುತ್ತದೆ. ಹೀಗಾಗಿ ಮೊದಲ ಹಂತವಾಗಿ ರಾಜಕೀಯ ಪಕ್ಷ ಗಳ ಪ್ರತಿನಿಧಿಗಳಿಗೆ ಅರಿವು ಮೂಡಿಸಲಾಗುತ್ತಿದೆ . ಮುಕ್ತ ಹಾಗೂ ಪಾರದರ್ಶಕತೆಯಿಂದ ಚುನಾವಣೆ ಕಾರ್ಯ ನಡೆಯಲಿದೆ. ಇವಿಎಂ ಹಾಗೂ ವಿವಿ ಪ್ಯಾಟ್‌ ಬಳಕೆ ಬಗ್ಗೆ ಜನರಿಗೆ ಯಾವುದೇ ಗೊಂದಲ ಸಂದೇಹವಿಲ್ಲದಂತೆ ಮಾಹಿತಿ ನೀಡಲಾಗುತ್ತದೆ. ಪ್ರಾತ್ಯಕ್ಷಿಕೆ ಮೂಲಕವೇ ಜನರಿಗೆ ಮನದಟ್ಟು ಮಾಡಿಕೊಡಲಾಗುತ್ತದೆ .ವಿವಿ ಪ್ಯಾಟ್‌ನಲ್ಲಿ ಮತದಾರರು ಅವರು ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಎಂಬುದನ್ನು ಖಚಿತ ಪಡಿಸಿಕೊಳ್ಳಬಹುದಾಗಿದೆ. ಯಾವ ಅಭ್ಯರ್ಥಿಗೆ ಮತ ಚಲಾಯಿಸಿದೆಯೋ ಅಂತಹ ಅಭ್ಯರ್ಥಿಯ ಕ್ರಮಸಂಖ್ಯೆ ಹೆಸರು ಮತ್ತು ಚಿನ್ಹೆ ವಿವಿ ಪ್ಯಾಟ್‌ ಒಳಗಿನ ಚೀಟಿಯ ಮೇಲೆ ಮುದ್ರಿತಗೊಂಡು 7 ಸೆಕೆಂಡ್‌ಗಳ ಕಾಲ ಪ್ರದರ್ಶಿತವಾಗಲಿದೆ'' ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕೆ.ಹರೀಶ್‌ ಕುಮಾರ್‌ ಮಾತನಾಡಿ, ಇವಿಎಂ ಹಾಗೂ ವಿವಿ ಪ್ಯಾಟ್‌ಗಳನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಬಳಕೆ ಮಾಡಲಾಗಿದೆ. ಜನರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಯಾವುದೇ ಗೊಂದಲ ಇಲ್ಲದೆ ಬಳಸಲು ಅರಿವು ಮೂಡಿಸುವ ಉದ್ದೇಶದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಹೊಸ ಮತದಾರರು ಬಳಕೆಮಾಡಲು ಸಹ ಜಾಗೃತಿ ಮೂಡಿಸಬೇಕಿದೆ ಎಂದರು.

ಜಿಲ್ಲಾ ತರಬೇತಿ ನೋಡಲ್‌ ಅಧಿಕಾರಿ ವೃಷಭೇಂದ್ರಕುಮಾರ್‌, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಪ್ರೊ. ಗಣೇಶ್‌ ಪ್ರಾತ್ಯಕ್ಷಿಕೆ ಮೂಲಕ ವಿವರ ನೀಡಿದರು.

ರಾಜಕೀಯ ಪಕ್ಷ ದ ಪ್ರತಿನಿಧಿಗಳಾದ ಸೈಯದ್‌ ರಫಿ, ಸಿ.ಎಂ.ಕೃಷ್ಣಮೂರ್ತಿ, ಮಹೇಶ್‌ಗೌಡ, ಎಂ.ಮಹೇಶ್‌, ಭಾಗ್ಯ, ಮಹೇಶ್‌ ಮರಿಯಾಲ, ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ