ಆ್ಯಪ್ನಗರ

ವೈದ್ಯರ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಂಭವ

ಪಶ್ಚಿಮ ಬಂಗಾಳದಲ್ಲಿ ಕರ್ತವ್ಯನಿರತ ವæೖದ್ಯರ ಮೇಲಿನ ಹಲ್ಲೆ ಖಂಡಿಸಿ ಜೂ.17ರಂದು ನಡೆಯುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಐಎಂಎ ಜಿಲ್ಲಾ ಘಟಕ ಬೆಂಬಲ ಸೂಚಿಸಿದೆ ಎಂದು ಘಟಕದ ಅಧ್ಯಕ್ಷ ಡಾ.ಬಸವರಾಜೇಂದ್ರ ತಿಳಿಸಿದ್ದು, ನಗರ ಸೇರಿದಂತೆ ಜಿಲ್ಲಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Vijaya Karnataka 17 Jun 2019, 5:00 am
ಚಾಮರಾಜನಗರ: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯನಿರತ ವæೖದ್ಯರ ಮೇಲಿನ ಹಲ್ಲೆ ಖಂಡಿಸಿ ಜೂ.17ರಂದು ನಡೆಯುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಐಎಂಎ ಜಿಲ್ಲಾ ಘಟಕ ಬೆಂಬಲ ಸೂಚಿಸಿದೆ ಎಂದು ಘಟಕದ ಅಧ್ಯಕ್ಷ ಡಾ.ಬಸವರಾಜೇಂದ್ರ ತಿಳಿಸಿದ್ದು, ನಗರ ಸೇರಿದಂತೆ ಜಿಲ್ಲಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
Vijaya Karnataka Web doctors strike
ವೈದ್ಯರ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಂಭವ


ಮುಷ್ಕರಕ್ಕೆ ಬೆಂಬಲ ಸೂಚಿರುವ ಹಿನ್ನೆಲೆಯಲ್ಲಿ ಸೋಮವಾರ ಎಲ್ಲಾ ಖಾಸಗಿ ಆಸ್ಪತ್ರೆ, ನರ್ಸಿಂಗ್‌ ಹೋಂ ಮತ್ತು ಕ್ಲಿನಿಕ್‌ಗಳಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತಗೊಳಿಸಲಾಗುತ್ತದೆ. ಮಾನವೀಯ ನೆಲೆಯಲ್ಲಿ ತುರ್ತು ಚಿಕಿತ್ಸೆ ಮತ್ತು ಒಳರೋಗಿಗಳಿಗೆ ಚಿಕಿತ್ಸೆ ಇರುತ್ತದೆ. ಆರೋಗ್ಯ ಸೇವೆಯಲ್ಲಿ ಉಂಟಾಗುವ ವ್ಯತ್ಯಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಐಎಂಎ ಜಿಲ್ಲಾಧ್ಯಕ್ಷ ಡಾ.ಬಸವರಾಜೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಗುಂಡ್ಲುಪೇಟೆಯಲ್ಲೂ ಬಂದ್‌: ಪಶ್ಚಿಮ ಬಂಗಾಳದಲ್ಲಿ ಕರ್ತವ್ಯನಿರತ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಗುಂಡ್ಲುಪೇಟೆ ತಾಲೂಕು ಐಎಂಎ ಬೆಂಬಲಿಸಿದ್ದು, ಪಟ್ಟಣದಲ್ಲಿ ಜೂ.17 ರಂದು ಖಾಸಗೀ ಕ್ಲಿನಿಕ್‌ಗಳನ್ನು ಬಂದ್‌ ಮಾಡಲಾಗುತ್ತಿದೆ ಎಂದು ಐಎಂಎ ತಾಲೂಕು ಅಧ್ಯಕ್ಷ ಡಾ.ಕೆ.ಎನ್‌.ಚಂದ್ರಚೂಢ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರಕಾರಿ ಆಸ್ಪತ್ರೆಯಲ್ಲಿ ವ್ಯತ್ಯಯ ಇಲ್ಲ

ದೇಶವ್ಯಾಪಿ ಸೋಮವಾರ ಖಾಸಗಿ ವೈದ್ಯರು ಮುಷ್ಕರ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್‌.ಪ್ರಸಾದ್‌ ತಿಳಿಸಿದ್ದಾರೆ. ರೋಗಿಗಳಿಗೆ ಅನಾನುಕೂಲವಾಗಬಾರದು ಎಂಬ ಹಿನ್ನೆಲೆಯಲ್ಲಿ ವೈದ್ಯರಿಗೆ ರಜೆ ತೆಗೆದುಕೊಳ್ಳದಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ