ಆ್ಯಪ್ನಗರ

ವೈದ್ಯರ ಮುಷ್ಕರ: ಚಾಮರಾಜನಗರದಲ್ಲಿ ಚಿಕಿತ್ಸೆ ಸಿಗದೆ ರೋಗಿ ಸಾವು

ವೈದ್ಯರ ಮುಷ್ಕರಿಂದಾಗಿ ರೋಗಿಗಳು ಪರದಾಡುವಂತಾಗಿದೆ.

Vijaya Karnataka Web 15 Nov 2017, 6:59 pm
ಚಾಮರಾಜನಗರ: ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ‌‌ ವ್ಯಕ್ತಿಯೊಬ್ಬನಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರೆಯದೆ ಸಾವನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
Vijaya Karnataka Web doctors strike patient dead in chamarajanagar
ವೈದ್ಯರ ಮುಷ್ಕರ: ಚಾಮರಾಜನಗರದಲ್ಲಿ ಚಿಕಿತ್ಸೆ ಸಿಗದೆ ರೋಗಿ ಸಾವು


ಬೆಳಗ್ಗೆ ಚಾಮರಾಜನಗರದ‌ ರಾಮಸಮುದ್ರದ‌ ನಾಗಮಲ್ಲೇಶ್ (33) ಎಂಬುವರಿಗೆ ಎದೆ‌ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಚಾಮರಾಜನಗರ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ಮುಂದಾಗಿದ್ದಾರೆ.

ಆದರೆ ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲು ಕೂಡ ವೈದ್ಯರು ಸರಿಯಾದ ಸಮಯಕ್ಕೆ ಸಿಕ್ಕಿಲ್ಲ.

ನಂತರ ವೈದ್ಯರು ತಡವಾಗಿ ಬಂದು ಹೆಚ್ಚಿನ ಚಿಕಿತ್ಸೆಗೆ‌ ಮೈಸೂರಿಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ ಸರಿಯಾದ ಸಮಯಕ್ಕೆ ಆಂಬ್ಯೂಲೆನ್ಸ್ ಸಿಗದ ಹಿನ್ನೆಲೆಯಲ್ಲಿ 40 ನಿಮಿಷ ತಡವಾಗಿ‌ ಮೈಸೂರು ಕರೆದುಕೊಂಡು ಹೋಗಲಾಗುತ್ತಿತ್ತು.

ಆದರೆ ಮಾರ್ಗ ಮಧ್ಯದಲ್ಲೇ ನಾಗಮಲ್ಲೇಶ್‌ ಮೃತಪಟ್ಟಿದ್ದಾರೆ.

Doctors Strike: Patient Dead in Chamarajanagar

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ