ಆ್ಯಪ್ನಗರ

ನೀತಿಸಂಹಿತೆ: ಪ್ರೋತ್ಸಾಹ ಧನ ತಡೆಗೆ ಆಕ್ಷೇಪ

ತೆಂಗು ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಬೆಳೆಗಾರರಿಗೆ ನೀಡಬೇಕಿದ್ದ ಪ್ರೋತ್ಸಾಹಧನವನ್ನು ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ತಡೆ ಹಿಡಿದಿರುವುದು ಸರಿಯಲ್ಲ ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ ಆರೋಪಿಸಿದ್ದಾರೆ.

Vijaya Karnataka 15 Mar 2019, 5:00 am
ಗುಂಡ್ಲುಪೇಟೆ : ತೆಂಗು ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಬೆಳೆಗಾರರಿಗೆ ನೀಡಬೇಕಿದ್ದ ಪ್ರೋತ್ಸಾಹಧನವನ್ನು ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ತಡೆ ಹಿಡಿದಿರುವುದು ಸರಿಯಲ್ಲ ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ ಆರೋಪಿಸಿದ್ದಾರೆ.
Vijaya Karnataka Web ethics prohibition of encouragement
ನೀತಿಸಂಹಿತೆ: ಪ್ರೋತ್ಸಾಹ ಧನ ತಡೆಗೆ ಆಕ್ಷೇಪ


ತೆಂಗು ಪುನಶ್ಚೇತನ ಯೋಜನೆಯಡಿ ಈ ಹಿಂದೆ ಆಹ್ವಾನಿಸಿದಂತೆ ತೆಂಗು ಬೆಳೆಗಾರರು ತೋಟಗಾರಿಕೆಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ, ತಾಕುಗಳ ಪರಿಶೀಲನೆ ಇತರೆ ಪ್ರಕ್ರಿಯೆಗಳು ಮುಗಿದಿದ್ದು, ಕೆಲ ತಿಂಗಳ ಹಿಂದೆಯೇ ಜಿಲ್ಲಾಧಿಕಾರಿಯವರ ಖಾತೆಗೆ ಬಂದಿದ್ದ ಧನ ಸಹಾಯದ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಸಲುವಾಗಿ ಉಪ ಖಜಾನೆ ಕಚೇರಿಗೆ ಚೆಕ್‌ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಚುನಾವಣೆ ನೀತಿ ಸಂಹಿತೆ ಕಾರಣ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲು ಬರುವುದಿಲ್ಲ ಎಂದು ಉಪ ಖಜಾನೆ ಅಧಿಕಾರಿಗಳು ಕಾರಣ ನೀಡುತ್ತಿದ್ದಾರೆ. ಅಧಿಕಾರಿಗಳ ನಿಧಾನಗತಿಯ ಕಾರ್ಯದಿಂದ ಈ ರೀತಿ ಆಗಿದ್ದು, ಕೈಗೆ ಬಂದ ತುತ್ತು ರೈತರ ಬಾಯಿಗೆ ಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ರೈತರ ಮನವಿ ಪರಿಗಣಿಸಿ ಆರ್ಥಿಕ ನೆರವಿನ ಹಣ ರೈತರ ಖಾತೆಗೆ ಜಮೆ ಆಗುವಂತೆ ಜಿಲ್ಲಾಧಿಕಾರಿಯವರು ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಶಿವಪುರ ಮಹದೇವಪ್ಪ, ತಾಲೂಕು ಅಧ್ಯಕ್ಷ ಕುಂದಕೆರೆ ಸಂಪತ್ತು, ಮುಖಂಡರಾದ ಕಡಬೂರು ಮಂಜುನಾಥ್‌, ತೆರಕಣಾಂಬಿ ಶಾಂತಮಲ್ಲಪ್ಪ, ಸಿದ್ದಪ್ಪ, ಕುಮಾರ್‌, ಸಿದ್ದಶೆಟ್ಟಿ, ವಿವಿಧ ಗ್ರಾಮ ಘಟಕಗಳ ಪದಾಧಿಕಾರಿಗಳು ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ