ಆ್ಯಪ್ನಗರ

ಪರಿಸರ ಸಂರಕ್ಷಣೆಗೆ ಎಲ್ಲರ ಸಹಕಾರ ಅತ್ಯಗತ್ಯ

ಪರಿಸರ ಉಳಿವಿಗೆ ಗ್ರಾಮದ ಮತ್ತು ಪಟ್ಟಣದ ಜನರು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್‌.ಬಾಲರಾಜು ತಿಳಿಸಿದರು.

Vijaya Karnataka 9 Sep 2018, 5:00 am
ಚಾಮರಾಜನಗರ : ಪರಿಸರ ಉಳಿವಿಗೆ ಗ್ರಾಮದ ಮತ್ತು ಪಟ್ಟಣದ ಜನರು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್‌.ಬಾಲರಾಜು ತಿಳಿಸಿದರು.
Vijaya Karnataka Web everyones cooperation is essential for environment conservation
ಪರಿಸರ ಸಂರಕ್ಷಣೆಗೆ ಎಲ್ಲರ ಸಹಕಾರ ಅತ್ಯಗತ್ಯ


ತಾಲೂಕಿನ ಮಾದಪುರ ಬಳಿ ಇರುವ ಕೇಂದ್ರೀಯ ವಿದ್ಯಾಲಯದ ರಸ್ತೆ ಬದಿಯಲ್ಲಿ ಈಶ್ವರಿ ಸೋಷಿಯಲ್‌ ಟ್ರಸ್ಟ್‌ನ ವತಿಯಿಂದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಕೃಷ್ನ ಜನ್ಮದಿನದ ಅಂಗವಾಗಿ 200 ಸಾಲು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತದ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ಹೆಚ್ಚಿನ ಗಿಡ ನೆಡುವಂತೆ ಕರೆ ನೀಡಿದ್ದಾರೆ. ಅವರ ಬೆಂಬಲವಾಗಿ ನಾವೆಲ್ಲರೂ ನಿಲ್ಲಬೇಕಾಗಿದೆ. ಆ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕಾಗಿದೆ ಎಂದರು.

ನಗರಸಭೆ ನೂತನ ಸದಸ್ಯ ಬಸವಣ್ಣ ಮಾತನಾಡಿ, ಪ್ರತಿಯೊಬ್ಬರು ಮರ,ಗಿಡಗಳನ್ನು ರಕ್ಷಿಸುವ ಹೊಣೆ ಹೊರಬೇಕು. ನಮ್ಮ ಜನ ನಮ ್ಮಭೂಮಿ, ಅದೇ ರೀತಿ ನಮ್ಮ ಪರಿಸರ ಎಂದು ತಿಳಿದುಕೊಳ್ಳಬೇಕು. ಪರಿಸರ ಉತ್ತಮ ವಾಗಿದ್ದರೆ ಯಾವುದೇ ರೋಗಗಳು ಬರುವುದಿಲ್ಲ ಎಂಬುದನ್ನು ಅರಿಯಬೇಕು ಎಂದರು.

ಕಲಾವಿದೆ ಪಂಕಜಾ ಅವರು ಮಾತನಾಡಿ, ಬೆಂಗಳೂರಿನಲ್ಲಿ ಕಾಂಕ್ರೀಟ್‌ ಕಟ್ಟಡಗಳ ಮಧ್ಯೆ ಗಿಡ, ಮರಗಳನ್ನು ನೋಡುವ ಭಾಗ್ಯ ಸಿಗುವುದಿಲ್ಲ. ಆದರೆ ಚಾಮರಾಜನಗರದಲ್ಲಿ ಈಶ್ವರಿ ಸೋಷಿಯಲ್‌ ಟ್ರಸ್ಟ್‌ ನಿಂದ ಪಟ್ಟಣದ ರಸ್ತೆ ಬದಿಗಳಲ್ಲಿ ಗಿಡ,ಮರಗಳನ್ನು ಬೆಳೆಸಿ ರಕ್ಷಿಸುತ್ತಿರುವುದು ಶ್ಲಾಘನೀಯ ಎಂದರು.

ಈಶ್ವರಿ ಸೋಷಿಯಲ್‌ ಟ್ರಸ್ಟ್‌ ಅಧ್ಯಕ್ಷ ಸಿ.ಎಂ.ವೆಂಕಟೇಶ್‌ ಮಾತನಾಡಿ ನಮ್ಮ ಸಂಸ್ಥೆಯ ವತಿಯಿಂದ ಇದುವರೆಗೆ 2 ಸಾವಿರ ಗಿಡಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ ಎಂದರು.

ರೋಟರಿ ಸಿಲ್ಕ್‌ಸಿಟಿ ಅಧ್ಯಕ್ಷ ಅಜಯ್‌, ರಾಮಶೇಷ ಪಾಠಶಾಲೆಯ ಪ್ರಾಂಶುಪಾಲ ಪ್ರದೀಪ್‌ಕುಮಾರ್‌ದೀಕ್ಷಿತ್‌, ಗಾಳಿಪುರ ಮಂಜು, ಎಲ್‌.ಸುರೇಶ್‌, ಮಹದೇವು, ಉಮೇಶ್‌, ಮಹೇಶ್‌ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ