ಚಾಮರಾಜನಗರ: ವಿದ್ಯಾರ್ಥಿ ವೇತನ, ಬಿಸಿಯೂಟ, ಕ್ಷೀರಭಾಗ್ಯ, ವಿದ್ಯಾಸಿರಿ ಸೇರಿದಂತೆ ನಾನಾ ಸೌಲಭ್ಯ ದೊರೆಯುವ ಸರಕಾರಿ ಶಾಲೆಗೆ ಪೋಷಕರು ತಮ್ಮ ಮಕ್ಕಳನ್ನು ದಾಖಲು ಮಾಡಬೇಕು ಎಂದು ಗ್ರಾ.ಪಂ.ಮಾಜಿ ಅಧ್ಯಕ್ಷ ಶಮಿತ್ಕುಮಾರ್ ತಿಳಿಸಿದರು.
ತಾಲೂಕಿನ ವೆಂಕಟಯ್ಯನಛತ್ರ ಹೊಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶೂ ವಿತರಿಸಿ ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಬಡ ವರ್ಗದ ವಿದ್ಯಾರ್ಥಿಗಳು ಹೆಚ್ಚಿನಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂಥ ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಪಠ್ಯಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಕ್ಷೀರಭಾಗ್ಯ, ವಿದ್ಯಾಸಿರಿ, ಸಮವಸ್ತ್ರ, ಸೈಕಲ್ವಿತರಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಈ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ತಮ್ಮ ಗ್ರಾಮ ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಇತ್ತೀಚೆಗೆ ಖಾಸಗಿ ಶಿಕ್ಷ ಣಸಂಸ್ಥೆಗಳು ನಾಯಿಕೊಡೆಗಳಂತೆ ತಲೆಎತ್ತಿದ್ದು, ಶಾಲೆಗಳಲ್ಲಿ ಸರಿಯಾಗಿ ಆಟದ ಮೈದಾನಗಳಿಲ್ಲ. ಗೂಡಿನಂತಹ ಕಟ್ಟಡಗಳಲ್ಲಿ ಮಕ್ಕಳನ್ನು ಕೂಡಿ ಹಾಕಿ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದರೆ ಸರಕಾರಿ ಶಾಲೆಯಲ್ಲೂ ಕೂಡಾ ಗುಣಮಟ್ಟದ ಶಿಕ್ಷ ಣ ದೊರೆಯುವಂತಾಗಬೇಕು ಎಂದರು.
ಗ್ರಾಮಪಂಚಾಯಿತಿ ಸದಸ್ಯೆ ನೀಲಮ್ಮ ನಂಜುಂಡಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷೆ ಮಹೇಶ್ವರಿ, ಮುಖ್ಯಶಿಕ್ಷ ಕಿ ಗಾಯತ್ರಿ, ಶಿಕ್ಷ ಕರಾದ ಲಲಿತಾ, ಪುಷ್ಪಾಕುಮಾರಿ, ಅಂಬಿಕಾ, ನಾಗಲಾಂಬಿಕ, ಜಗದಾಂಬಿಕ ಸೇರಿದಂತೆ ಇತರರು ಹಾಜರಿದ್ದರು.
ತಾಲೂಕಿನ ವೆಂಕಟಯ್ಯನಛತ್ರ ಹೊಸೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶೂ ವಿತರಿಸಿ ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಬಡ ವರ್ಗದ ವಿದ್ಯಾರ್ಥಿಗಳು ಹೆಚ್ಚಿನಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂಥ ವಿದ್ಯಾರ್ಥಿಗಳಿಗೆ ಸರಕಾರ ಉಚಿತ ಪಠ್ಯಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಕ್ಷೀರಭಾಗ್ಯ, ವಿದ್ಯಾಸಿರಿ, ಸಮವಸ್ತ್ರ, ಸೈಕಲ್ವಿತರಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಈ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ, ತಮ್ಮ ಗ್ರಾಮ ಮತ್ತು ಪೋಷಕರಿಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಇತ್ತೀಚೆಗೆ ಖಾಸಗಿ ಶಿಕ್ಷ ಣಸಂಸ್ಥೆಗಳು ನಾಯಿಕೊಡೆಗಳಂತೆ ತಲೆಎತ್ತಿದ್ದು, ಶಾಲೆಗಳಲ್ಲಿ ಸರಿಯಾಗಿ ಆಟದ ಮೈದಾನಗಳಿಲ್ಲ. ಗೂಡಿನಂತಹ ಕಟ್ಟಡಗಳಲ್ಲಿ ಮಕ್ಕಳನ್ನು ಕೂಡಿ ಹಾಕಿ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದರೆ ಸರಕಾರಿ ಶಾಲೆಯಲ್ಲೂ ಕೂಡಾ ಗುಣಮಟ್ಟದ ಶಿಕ್ಷ ಣ ದೊರೆಯುವಂತಾಗಬೇಕು ಎಂದರು.
ಗ್ರಾಮಪಂಚಾಯಿತಿ ಸದಸ್ಯೆ ನೀಲಮ್ಮ ನಂಜುಂಡಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷೆ ಮಹೇಶ್ವರಿ, ಮುಖ್ಯಶಿಕ್ಷ ಕಿ ಗಾಯತ್ರಿ, ಶಿಕ್ಷ ಕರಾದ ಲಲಿತಾ, ಪುಷ್ಪಾಕುಮಾರಿ, ಅಂಬಿಕಾ, ನಾಗಲಾಂಬಿಕ, ಜಗದಾಂಬಿಕ ಸೇರಿದಂತೆ ಇತರರು ಹಾಜರಿದ್ದರು.