ಆ್ಯಪ್ನಗರ

ರೆಸಾರ್ಟ್‌ ರಾಜಕಾರಣ ಖಂಡಿಸಿ ಪೊರಕೆ ಚಳವಳಿ

ರಾಜ್ಯದಲ್ಲಿ ಭೀಕರ ಬರಗಾಲ ಎದುರಾದರೂ ಸಹ ಜನರ ಸಮಸ್ಯೆಯನ್ನು ನಿರ್ಲಕ್ಷಿಸಿ ಶಾಸಕರು ರೆಸಾರ್ಟ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

Vijaya Karnataka 16 Jul 2019, 5:00 am
ಚಾಮರಾಜನಗರ : ರಾಜ್ಯದಲ್ಲಿ ಭೀಕರ ಬರಗಾಲ ಎದುರಾದರೂ ಸಹ ಜನರ ಸಮಸ್ಯೆಯನ್ನು ನಿರ್ಲಕ್ಷಿಸಿ ಶಾಸಕರು ರೆಸಾರ್ಟ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Vijaya Karnataka Web CHN-CHN15UM1


ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಪæäರಕೆ ಹಿಡಿದು, ಹಾಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ ಅವರ ಭಾವಚಿತ್ರಗಳಿಗೆ ಪæäರಕೆಯಿಂದ ಬಡಿದು, ಅಧಿಕಾರಕ್ಕಾಗಿ ಕುತಂತ್ರ ರಾಜಕಾರಣ ಮಾಡುವ ಶಾಸಕರಿಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಾ, ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡು, ಮಾನವ ಸರಪಳಿ ನಿರ್ಮಿಸುವ ಮೂಲಕ ರಸ್ತೆತಡೆ ಪ್ರತಿಭಟನೆ ನಡೆಸಿ,

ಪೈಸೆಗೆ ಹರಾಜು; ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾವಚಿತ್ರವನ್ನು 6 ಪೈಸೆ, 7 ಪೈಸೆ ಅಣಕು ಹರಾಜು ಪ್ರಕ್ರಿಯೆ ನಡೆಸಿ ಖಂಡಿಸಿದರು.

ರಾಜ್ಯದಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಬಿತ್ತನೆ ಮಾಡಿದ್ದ ಬೆಳೆಗಳು ಒಣಗುತ್ತಿವೆ, ಜನ, ಜಾನುವಾರುಗಳು ಕುಡಿಯುವ ನೀರಿನ ಅಭಾವ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನರ ಹಿತ ಕಾಪಾಡಲು ಸರಕಾರ ಸಮರೋಪಾದಿಯ ಕ್ರಮ ಕೈಗೊಳ್ಳಬೇಕು, ಅದು ಬಿಟ್ಟು, ಪಕ್ಷ ದಿಂದ ಪಕ್ಷ ಕ್ಕೆ ಹಾರುವ ಮೂಲಕ ಶಾಸಕರು ರೆಸಾರ್ಟ್‌ ರಾಜಕಾರಣ ಮಾಡುತ್ತಿದ್ದು, ಅಧಿಕಾರ ಕೊಟ್ಟ ಮತದಾರರಿಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರೆಸಾರ್ಟ್‌ ರಾಜಕಾರಣ ಬಿಟ್ಟು, ಸಾರ್ವಜನಿಕರ ಕೆಲಸ ಮಾಡಲು ಮುಂದಾಗಿ, ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಬೇಕು, ಇಲ್ಲದಿದ್ದರೆ ನಿಮ್ಮನ್ನೆಲ್ಲಾ ವಿಧಾನಸೌಧದಿಂದ ಹೊರದಬ್ಬುವ ಕೆಲಸ ರೈತ ಸಂಘದಿಂದ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಹೊನ್ನೂರು ಪ್ರಕಾಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್‌, ತಾಲೂಕು ಅಧ್ಯಕ್ಷ ಮಹದೇವಸ್ವಾಮಿ, ಮಾಡ್ರಹಳ್ಳಿ ಮಹದೇವಪ್ಪ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಕಂದೇಗಾಲ ಮಹೇಶ್‌, ಚಂಗಡಿಕರಿಯಪ್ಪ, ಶಾಂತಕುಮಾರ್‌, ಕೌದಳ್ಳಿಮುತ್ತಯ್ಯ, ಅಂಬಳೆಶಿವಕುಮಾರ್‌, ಚನ್ನಪ್ಪನಪುರ ಪ್ರಸಾದ್‌, ಬೂದಿತಿಟ್ಟು ಮಹದೇವ, ಅಣ್ಣೂರು ಕೇರಿ ಸಿದ್ದರಾಜು ಸೇರಿದಂತೆ ರೈತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ