ಆ್ಯಪ್ನಗರ

ವೇತನ ಪಾವತಿಗೆ ಒತ್ತಾಯ: ವಾಟರ್‌ಮನ್‌ಗಳ ಪ್ರತಿಭಟನೆ

ವಾಟರ್‌ಮ್ಯಾನ್‌ಗಳಿಗೆ ಕಳೆದ 15 ತಿಂಗಳಿಂದ ವೇತನವನ್ನು ಪಾವತಿಸದಿರುವುದನ್ನು ಖಂಡಿಸಿ ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಹೊರ ಗುತ್ತಿಗೆ ಕಾರ್ಮಿಕರ ಒಕ್ಕೂಟದ ಸದಸ್ಯರು ಹನೂರು ಪಟ್ಟಣ ಪಂಚಾಯಿತಿ ಕಚೇರಿ ಪ್ರತಿಭಟನೆ ನಡೆಸಿದರು.

Vijaya Karnataka 4 Jan 2019, 5:00 am
ಹನೂರು : ವಾಟರ್‌ಮ್ಯಾನ್‌ಗಳಿಗೆ ಕಳೆದ 15 ತಿಂಗಳಿಂದ ವೇತನವನ್ನು ಪಾವತಿಸದಿರುವುದನ್ನು ಖಂಡಿಸಿ ಹೊರಗುತ್ತಿಗೆ ನೌಕರರ ಸಂಘ, ಕರ್ನಾಟಕ ರಾಜ್ಯ ಹೊರ ಗುತ್ತಿಗೆ ಕಾರ್ಮಿಕರ ಒಕ್ಕೂಟದ ಸದಸ್ಯರು ಹನೂರು ಪಟ್ಟಣ ಪಂಚಾಯಿತಿ ಕಚೇರಿ ಪ್ರತಿಭಟನೆ ನಡೆಸಿದರು.
Vijaya Karnataka Web force payment water mans protest
ವೇತನ ಪಾವತಿಗೆ ಒತ್ತಾಯ: ವಾಟರ್‌ಮನ್‌ಗಳ ಪ್ರತಿಭಟನೆ


ಹನೂರು ಪಟ್ಟಣ ಪಂಚಾಯಿತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕಳೆದ 15 ತಿಂಗಳಿಂದ ವೇತನವನ್ನು ಪಾವತಿಸದೆ ಇರುವುದರಿಂದ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ವೇತನವನ್ನು ಪಾವತಿಸುವವರೆಗೆ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನಾನಿರತರ ಪ.ಪಂ. ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ತಮ್ಮ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ನಮ್ಮ ಬದುಕುವ ಹಕ್ಕನ್ನು ರಕ್ಷಿಸಬೇಕೆಂದು ಮನವಿ ಮಾಡಿದರು.

ಮುಖ್ಯಾಧಿಕಾರಿ ಎಸ್‌.ಡಿ ಮೋಹನ್‌ ಕೃಷ್ಣ ಮಾತನಾಡಿ, ಎರಡು ತಿಂಗಳ ವೇತನವನ್ನು ಕೊಡಲೇ ಮಾಡಿಕೊಡಲಾಗುವುದು, ಉಳಿದ ವೇತನವನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮಾಡಿಕೊಡಲಾಗುವುದು, ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ಈ ಸಂದರ್ಭದಲ್ಲಿ ವಾಟರ್‌ ಮ್ಯಾನ್‌ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣ, ಉಪಾಧ್ಯಕ್ಷ ಸಿ.ಸತೀಶ್‌, ರಾಜೇಂದ್ರಪ್ರಸಾದ್‌, ಸುರೇಶ್‌ ಬಾಬು, ಎನ್‌.ರವಿಕುಮಾರ್‌, ಸಿದ್ದರಾಜು, ದೇವರಾಜು, ಆರ್‌.ರವಿಕುಮಾರ್‌ ಇನ್ನಿತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ