ಆ್ಯಪ್ನಗರ

ಸೆಸ್ಕ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಹನೂರು ಪಟ್ಟಣದ ಸೆಸ್ಕ್‌ ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

Vijaya Karnataka 23 Nov 2018, 5:00 am
ಹನೂರು : ಹನೂರು ಪಟ್ಟಣದ ಸೆಸ್ಕ್‌ ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
Vijaya Karnataka Web formers protest
ಸೆಸ್ಕ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ


ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್‌ ಸಮಸ್ಯೆಯಿಂದಾಗಿ ರೈತರು ಪರದಾಡುವಂತಾಗಿದೆ. ಎಂ.ಜಿ ದೊಡ್ಡಿ ಗ್ರಾಮದ ರೈತರು ಟಿಸಿ ಅಳವಡಿಸುವಂತೆ ಅರ್ಜಿ ಸಲ್ಲಿಸಿ ಒಂದು ವರ್ಷವಾಗಿದ್ದರೂ ಇದುವರೆಗೂ ಟಿಸಿ ಅಳವಡಿಕೆಗೆ ಮುಂದಾಗಿಲ್ಲ. ಅಲ್ಲದೇ ಈ ಬಗ್ಗೆ ಇದುವರೆಗೆ ನಡೆದ ಜನಸಂಪರ್ಕ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಸಿದ್ದರೂ ಸಹ ಅಧಿಕಾರಿಗಳ:ಉ ನಿರ್ಲಕ್ಷ ್ಯ ವಹಿಸಿದ್ದಾರೆ. ವಿದ್ಯುತ್‌ ಕಂಬ ಅಳವಡಿಸಲು ಗುತ್ತಿಗೆದಾರರು ಹೆಚ್ಚುವರಿ ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಕರಿಯಪ್ಪ ಮಾತನಾಡಿ ಚಂಗಡಿ ಹಾಗೂ ಹೊಸದೊಡ್ಡಿ ಗ್ರಾಮದಲ್ಲಿ ವಿದ್ಯುತ್‌ ಸಮಸ್ಯೆಯಿದ್ದು, ಇದನ್ನು ಸರಿಪಡಿಸುವಂತೆ ಹಿಂದೆ ನಡೆದ ಜನಸಂಪರ್ಕ ಸಭೆಯಲ್ಲಿ ಮನವಿ ಮಾಡಲಾಗಿದೆ, ಆದರೆ ಇಲ್ಲಿನ ಸಿಬ್ಬಂದಿ ಅಧಿಕಾರಿಗಳ ಮುಂದೆ ಸರಿಪಡಿಸಲಾಗುವುದು ಎಂದು ತಿಳಿಸಿ ಇದುವರೆಗೆ ಗ್ರಾಮಕ್ಕೆ ಬಂದು ಪರಿಶೀಲನೆ ನಡೆಸಿಲ್ಲ. ಪರಿಣಾಮ ಗ್ರಾಮಸ್ಥರು ವಿದ್ಯುತ್‌ ಇಲ್ಲದೇ ಪರದಾಡುವಂತಾಗಿದೆ. ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವಣ್ಣ, ಕಜಾಂಚಿ ಅಂಬಳೆ ಶಧಿವಕುಮಾರ್‌, ಚಾಮರಾಜನಗರ ತಾಲ್ಲೂಕು ಅಧ್ಯಕ್ಷ ಮಹದೇವಸ್ವಾಮಿ, ಕರಿಯಪ್ಪ, ಜಡೇಸ್ವಾಮಿ, ಶಾಂತಕುಮಾರ್‌, ಆರೋಗ್ಯ ರಾಜು, ಮಾದಯ್ಯ, ತಂಬಡಿ ಇನ್ನಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ