ಆ್ಯಪ್ನಗರ

ಗಂಗಾ ಕಲ್ಯಾಣ: ಕೊಳವೆ ಬಾವಿಗಳಿಗೆ ವಿದ್ಯುತ್‌ ನೀಡಿ

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಮೂಲಕ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಿ ಎಂದು ಜಿ.ಪಂ. ಉಪಾಧ್ಯಕ್ಷ ಯೋಗೀಶ್‌ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

Vijaya Karnataka 23 Nov 2018, 5:00 am
ಚಾಮರಾಜನಗರ : ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ಮೂಲಕ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಿ ಎಂದು ಜಿ.ಪಂ. ಉಪಾಧ್ಯಕ್ಷ ಯೋಗೀಶ್‌ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
Vijaya Karnataka Web ganga welfare provide power to the nozzle wells
ಗಂಗಾ ಕಲ್ಯಾಣ: ಕೊಳವೆ ಬಾವಿಗಳಿಗೆ ವಿದ್ಯುತ್‌ ನೀಡಿ


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಕೊಳವೆಬಾವಿ, ಪಂಪ್‌ಸೆಟ್‌ಗಳಿಗೆ ವಿಳಂಬವಾಗಿ ವಿದ್ಯುತ್‌ ಸಂಪರ್ಕ ನೀಡುವುದರಿಂದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ. ನಿಗಮದ ಅಧಿಕಾರಿಗಳು ವಿದ್ಯುತ್‌ ಸರಬರಾಜು ನಿಗಮದ ಇಲಾಖೆಯವರೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಜಿ.ಪಂ. ಸಿಇಒ ಡಾ. ಕೆ. ಹರೀಶ್‌ ಕುಮಾರ್‌ ಅವರು, ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಮಾಹಿತಿಗೂ, ಅಧಿಕಾರಿಗಳು ನೀಡುತ್ತಿರುವ ಮಾಹಿತಿಗೂ ತಾಳೆಯಾಗುತ್ತಿಲ್ಲ. ಹಾಗಾಗಿ ಅನುಷ್ಠಾನ ನಿಗಮಗಳು ಹಾಗೂ ವಿದ್ಯುತ್‌ ಸರಬರಾಜು ನಿಗಮದ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆಯಲಾಗುವುದು. ಈ ಸಭೆಯಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಪಟ್ಟ ಪ್ರತಿಯೊಂದು ಅರ್ಜಿದಾರರ ವಿವರಗಳನ್ನು ಸಮರ್ಪಕವಾಗಿ ಸಲ್ಲಿಸಬೇಕೆಂದು ತಾಕೀತು ಮಾಡಿದರು.

ಪೋಲಾಗದಂತೆ ಕ್ರಮ ವಹಿಸಿ: ಇನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್‌, ನೀರು ಇತರೆ ಪ್ರಮುಖ ಸೌಲಭ್ಯಗಳು ಪæäೕಲಾಗದಂತೆ ಅಧಿಕಾರಿಗಳು ಹೆಚ್ಚು ಗಮನ ನೀಡಬೇಕೆಂದು ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹಗಲು ಹೊತ್ತಿನಲ್ಲಿಯೂ ಬೀದಿ ದೀಪಗಳು ಚಾಲನೆಯಲ್ಲಿರುವುದನ್ನು ಗಮನಿಸಿದ್ದೇನೆ. ಅತ್ಯಂತ ಅವಶ್ಯಕವಾಗಿರುವ ವಿದ್ಯುತ್‌ನ್ನು ನಿರ್ಲಕ್ಷ ್ಯದಿಂದ ಪೋಲು ಮಾಡಬಾರದು. ಈ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದು ಹೇಳಿದರು.

ಉಪಾಧ್ಯಕ್ಷ ರಾದ ಜೆ. ಯೋಗೀಶ್‌ ಅವರು, ವಿದ್ಯುತ್‌ ಕಂಬಗಳಿಗೆ ದೀಪ ನಿಯಂತ್ರಣದ ಸ್ವಿಚ್‌ನ್ನು ಅಳವಡಿಸಲಾಗಿರುತ್ತದೆ. ಆಯಾ ಗ್ರಾಮ ಪಂಚಾಯಿತಿ ನಿರ್ವಹಣೆ ಮಾಡುವ ವೇಳೆ ಗಮನಿಸಬೇಕಾಗುತ್ತದೆ ಎಂದರು.

ಸಾಲ ವಿಳಂಬದಿಂದ ತೊಂದರೆ: ಮುಂದುವರಿದು ಮಾತನಾಡಿದ ಉಪಾಧ್ಯಕ್ಷರು, ನಾನಾ ಯೋಜನೆಗಳಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಾಗಿ ಬ್ಯಾಂಕುಗಳಲ್ಲಿ ಸಾಲ ನೀಡಲಾಗುತ್ತಿಲ್ಲ. ಬ್ಯಾಂಕ್‌ ಅಧಿಕಾರಿಗಳು ಬಡವರಿಗೆ ಸ್ಪಂದಿಸದೇ ಇದ್ದರೆ ಹೇಗೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಇಒ ಡಾ. ಕೆ. ಹರೀಶ್‌ ಕುಮಾರ್‌ ಅವರು, ಲೀಡ್‌ಬ್ಯಾಂಕ್‌ ವ್ಯವಸ್ಥಾಪಕರು ಸಾಲ ಸೌಲಭ್ಯ ಸೇರಿದಂತೆ ಅನುಕೂಲಗಳನ್ನು ಕಲ್ಪಿಸಲು ಸೂಚನೆ ನೀಡಬೇಕು. ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಸವಲತ್ತುಗಳನ್ನು ತಲುಪಿಸುವ ದಿಸೆಯಲ್ಲಿ ಆದ್ಯತೆ ನೀಡುವಂತೆ ನಿರ್ದೇಶನ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ನಾನಾ ಸ್ಥಾಯಿ ಸಮಿತಿ ಅಧ್ಯಕ್ಷ ರಾದ ಚನ್ನಪ್ಪ, ಮರಗದಮಣಿ, ಉಮಾವತಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್‌ ಪಾಂಡೆ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ