ಆ್ಯಪ್ನಗರ

ಬಾಲಕಿಯ ಅನುಮಾನಾಸ್ಪದ ಸಾವು: ಪೋಷಕರ ವಿರುದ್ಧ ದೂರು ದಾಖಲು

ಬಾಲಕಿ ಸಾವಿನ ಬಗ್ಗೆ ಅನುಮಾನ ಮೂಡಿದೆ. ವಿಚಾರ ತಿಳಿದ ಪೊಲೀಸರು, ಆಕೆಯ ತಂದೆ ಗೋವಿಂದಶೆಟ್ಟಿ, ತಾಯಿ ಜಯಲಕ್ಷ್ಮಿ ವಿರುದ್ಧ ಪ್ರಕರಣ ಮುಚ್ಚಿಟ್ಟ ಹಿನ್ನೆಲೆಯಲ್ಲಿ ಅವರ ವಿರುದ್ಧವೇ ರಾಮಸಮುದ್ರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Vijaya Karnataka Web 28 Apr 2022, 8:40 pm
ಚಾಮರಾಜನಗರ: ತಾಲೂಕಿನ ಕಾಗಲವಾಡಿಮೋಳೆ ಗ್ರಾಮದಲ್ಲಿ ಬಾಲಕಿಯೊಬ್ಬಳು ಅನುಮಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ವಿಷಯ ಮುಚ್ಚಿಟ್ಟ ಪೋಷಕರ ವಿರುದ್ಧ ಇದೀಗ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ.
Vijaya Karnataka Web ಸಂಗ್ರಹ ಚಿತ್ರ
ಸಂಗ್ರಹ ಚಿತ್ರ


ಚಾಮರಾಜನಗರದ ಕಾಗಲವಾಡಿಮೋಳೆ ಗ್ರಾಮದ ಸುಮಿತ್ರಾ (16) ಮೃತ ಬಾಲಕಿ. ಈಕೆ ಕಳೆದ ಹತ್ತು ದಿನಗಳ ಹಿಂದೆ ಮೃತಪಟ್ಟಿದ್ದು, ಪೋಷಕರು ಯಾರ ಗಮನಕ್ಕೂ ತಾರದೇ ಅಂತ್ಯಕ್ರಿಯೆ ನೆರವೇರಿಸಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿ ಸಾವಿನ ಬಗ್ಗೆ ಅನುಮಾನ ಮೂಡಿದೆ. ವಿಚಾರ ತಿಳಿದ ಪೊಲೀಸರು, ಆಕೆಯ ತಂದೆ ಗೋವಿಂದಶೆಟ್ಟಿ, ತಾಯಿ ಜಯಲಕ್ಷ್ಮಿ ವಿರುದ್ಧ ಪ್ರಕರಣ ಮುಚ್ಚಿಟ್ಟ ಹಿನ್ನೆಲೆಯಲ್ಲಿ ಅವರ ವಿರುದ್ಧವೇ ರಾಮಸಮುದ್ರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಂಡೀಪುರದಲ್ಲಿ ಪ್ರವಾಸಿಗರ ಆಕರ್ಷಣೆ ಆಗಿರುವ ಕಾಡಾನೆ ಅವಳಿ ಮರಿಗಳು

ಆಗಿರುವುದು ಏನು?

ಮೃತ ಬಾಲಕಿ ಸುಮಿತ್ರಾ ತಮ್ಮದೇ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ತಿಳಿದ ತಂದೆ,ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ನೊಂದ ಬಾಲಕಿ ನೇಣಿಗೆ ಶರಣಾಗಿರಬಹುದು ಎಂಬುದು ಒಂದು ಮೂಲದ ಮಾಹಿತಿಯಾದರೆ, ಮತ್ತೊಂದು ಮಾಹಿತಿ ಪ್ರಕಾರ ಇದು ಕೊಲೆ ಎಂಬ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ವಿಚಾರ ತಿಳಿದ ಪೊಲೀಸರು, ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪೊಲೀಸರಿಗೆ ಮಾಹಿತಿ ನೀಡಬೇಕಿತ್ತು. ಆದರೆ, ಆ ವಿಚಾರವನ್ನು ಮುಚ್ಚಿಟ್ಟಿದ್ದರು. ಹೀಗಾಗಿ ಬಾಲಕಿ ಸಾವಿನ ವಿಚಾರವನ್ನು ಮುಚ್ಚಿಟ್ಟ ಕಾರಣ ಅವರ ತಂದೆ, ತಾಯಿ ವಿರುದ್ಧವೇ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಟಿ.ಪಿ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಮುಂದಿನ ತನಿಖೆಯಿಂದಷ್ಟೇ ಅಸಲಿ ವಿಚಾರ ಬಯಲಿಗೆ ಬರಬೇಕಿದೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿ ಬಂಧನ

ಚಾಮರಾಜನಗರ: ಅಪ್ರಾಪ್ತೆಯನ್ನು ಪ್ರೀತಿಸಿ, ವಿವಾಹವಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಚಾಮರಾಜನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಅರಳೀಪುರ ಗ್ರಾಮದ ಪ್ರಕಾಶ್‌(31) ಬಂಧಿತ ಆರೋಪಿ. ಈತ ಅಪ್ರಾಪ್ತೆಯೊಬ್ಬಳನ್ನು ಪ್ರೀತಿಸಿ, ವಿವಾಹವಾಗುವುದಾಗಿ ಕರೆದೊಯ್ದು ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪ್ರಕಾಶ್‌ನನ್ನು ಬಂಧಿಸಲಾಗಿದೆ ಎಂದು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್‌ ಬಿ.ಪುಟ್ಟಸ್ವಾಮಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಸೇರಲು ಮನಸ್ಸು ಒಪ್ಪಲಿಲ್ಲ: ಬೆಂಬಲಿಗರು ಬಿಜೆಪಿ ಸೇರುವ ವೇಳೆ ಶಾಸಕ ಎನ್ ಮಹೇಶ್ ಮಾತು..

ಏ.20ರಂದು ಬಾಲಕಿ ಕಾಣೆಯಾಗಿದ್ದಳು. ಈ ಬಗ್ಗೆ ಕುಟುಂಬ ದವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿತ ನಿಖೆ ಕೈಗೊಂಡ ಪೊಲೀಸರು ಆರೋಪಿ ಮತ್ತು ಬಾಲಕಿ ತಮಿಳು ನಾಡಿನಲ್ಲಿರುವುದನ್ನು ಪತ್ತೆಹಚ್ಚಿ, ಅಲ್ಲಿಗೆ ತೆರಳಿ ಆರೋಪಿ ಪ್ರಕಾಶ್‌ನನ್ನು ಬಂಧಿಸಿ, ಬಾಲಕಿಯನ್ನು ನಗರದ ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಬಿ.ಪುಟ್ಟಸ್ವಾಮಿ, ಪಿಎಸ್‌ಐ ರಾಜೇಂದ್ರ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ