ಆ್ಯಪ್ನಗರ

ಮೆರವಣಿಗೆಗೆ ಕಲಾತಂಡಗಳ ಮೆರುಗು

ನಗರದಲ್ಲಿ ಅ. 13 ರಿಂದ 16 ರವರಗೆ ನಡೆಯುವ ಸಾಂಸ್ಕೃತಿಕ ದಸರಾ ಕಲಾತಂಡಗಳ ಮೆರವಣಿಗೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಸಂಜೆ ಅದ್ದೂರಿ ಚಾಲನೆ ದೊರಕಿತು.

Vijaya Karnataka 14 Oct 2018, 5:00 am
ಚಾಮರಾಜನಗರ : ನಗರದಲ್ಲಿ ಅ. 13 ರಿಂದ 16 ರವರಗೆ ನಡೆಯುವ ಸಾಂಸ್ಕೃತಿಕ ದಸರಾ ಕಲಾತಂಡಗಳ ಮೆರವಣಿಗೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಸಂಜೆ ಅದ್ದೂರಿ ಚಾಲನೆ ದೊರಕಿತು.
Vijaya Karnataka Web glaze art galleries to parade
ಮೆರವಣಿಗೆಗೆ ಕಲಾತಂಡಗಳ ಮೆರುಗು


ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಣ ಸಚಿವ ಎನ್‌. ಮಹೇಶ್‌ ಅವರು ಮೊದಲು ಜಿಲ್ಲಾಡಳಿತಭವನದ ಆವರಣದಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.

ನಂತರ ನಂದಿಧ್ವಜಕ್ಕೆ ಪೂಜೆಮಾಡುವ ಮೂಲಕ ಜಾನಪದ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.

ಡೊಳ್ಳುಕುಣಿತ, ವೀರಗಾಸೆ, ಬೀಸುಕಂಸಾಳೆ, ಹುಲಿವೇಷಧಾರಿಗಳ ನೃತ್ಯ, ಆದಿವಾಸಿಗಳ ದೊಣ್ಣೆವರಸೆ, ಬ್ಯಾಂಡ್‌ಸೆಟ್‌, ಗೊರವರಕುಣಿತ, ಭಾರತ್‌ ಸ್ಕೌಟ್‌ ಅಂಡ್‌ ಗೈಡ್‌ ವಿದ್ಯಾರ್ಥಿಗಳು,

ನಗರದ ಜೆಎಸ್‌ಎಸ್‌ ಪದವಿಪೂರ್ವ ಕಾಲೇಜು, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೊರೆ ತೊಟ್ಟು ಹೆಜ್ಜೆಹಾಕುತ್ತ ಗಮನ ಸೆಳೆದರು.

ಎಲ್ಲೆಲ್ಲಿ ಸಂಚಾರ: ಜಿಲ್ಲಾಡಳಿತಭವನದ ಆವರಣದಿಂದ ತೆರಳಿದ ಕಲಾತಂಡಗಳ ಮೆರವಣಿಗೆ ಬಿ.ರಾಚಯ್ಯ ಜೋಡಿರಸ್ತೆ, ಭುವನೇಶ್ವರಿ ವೃತ್ತ, ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ, ಗುಂಡ್ಲುಪೇಟೆ ವೃತ್ತ ದೊಡ್ಡಂಗಡಿ ಬೀದಿ, ಚಿಕ್ಕಅಂಗಡಿಬೀದಿ ಮೂಲಕ ಸಂತೇಮರಹಳ್ಳಿ ವೃತ್ತ, ಅಲ್ಲಿಂದ ಭುವನೇಶ್ವರಿ ವೃತ್ತತಲುಪಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ ನಿರ್ಮಿಸಿರುವ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾವೇಶಗೊಂಡಿತು.

ಜಿಪಂ ಅಧ್ಯಕ್ಷೆ ಶಿವಮ್ಮ, ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‌ಕುಮಾರ್‌, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೀತಾಪ್ರಸನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರು ಚನ್ನಪ್ಪ ಸೇರಿದಂತೆ ನಗರಸಭೆ ಸದಸ್ಯ ಆರ್‌.ಎಂ.ರಾಜಪ್ಪ ನಾನಾ ಕಾಲೇಜು ಉಪನ್ಯಾಸಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ