ಆ್ಯಪ್ನಗರ

ಗ್ರಾಮ ಲೆಕ್ಕಾಧಿಕಾರಿಗಳ ಪ್ರತಿಭಟನೆ

ಮುಂಬಡ್ತಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ ಸರಿಪಡಿಸಬೇಕು, ಸಾರ್ವತ್ರಿಕ ರಜಾ ದಿನಗಳಲ್ಲಿ ಕೆಲಸದ ಒತ್ತಡಯೇರುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.

Vijaya Karnataka 17 Jul 2019, 8:48 pm
ಚಾಮರಾಜನಗರ: ಮುಂಬಡ್ತಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ ಸರಿಪಡಿಸಬೇಕು, ಸಾರ್ವತ್ರಿಕ ರಜಾ ದಿನಗಳಲ್ಲಿ ಕೆಲಸದ ಒತ್ತಡಯೇರುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.
Vijaya Karnataka Web CHN-CHN17UM4


ನಗರದ ಜಿಲ್ಲಾಡಳಿತಭವನದ ಆವರಣದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸುವ ಮೂಲಕ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರ ಮುಖಾಂತರ ಕಂದಾಯ ಇಲಾಖೆ ಪ್ರಧಾನ ಕಾರ್ಯ ದರ್ಶಿಗೆ ಹಕ್ಕೊತ್ತಾಯದ ಮನವಿ ಸಲ್ಲಿಸಿದರು.

‘‘ಸಾರ್ವತ್ರಿಕ ರಜಾ ದಿನಗಳಲ್ಲಿ ಕೆಲಸದ ಒತ್ತಡಯೇರುವುದನ್ನು ನಿಷೇಧಿಸಿ ಸರಕಾರ ಆದೇಶ ಮಾಡಿದ್ದರೂ ಕೆಲ ಜಿಲ್ಲೆಗಳಲ್ಲಿ ಈಗಲೂ ನೌಕರರ ಮೇಲೆ ಒತ್ತಡ ಹಾಕಲಾಗುತ್ತಿದೆ. ಕುಟುಂಬದ ಸದಸ್ಯರ ಜತೆ ಕಾಲಕಳೆಯಲು ಸಾಧ್ಯವಾಗದೇ, ಕೌಟುಂಬಿಕ ಕಲಹ ನಡೆಯುತ್ತಿವೆ. ಇದರಿಂದ ನೌಕರರು ಮಾನಸಿಕವಾಗಿ ಹತಾಶರಾಗುವ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸಂಘವು ಈಚೆಗೆ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿತ್ತು. ಆದರೆ, ನಮ್ಮ ಬೇಡಿಕೆಗಳು ಈವರೆವಿಗೂ ಈಡೇರಿಲ್ಲ,’’ಎಂದು ಆರೋಪಿಸಿದರು.

ಬೇಡಿಕೆಗಳೇನು: ‘‘ಗ್ರಾಮ ಲೆಕ್ಕಾಧಿಕಾರಿಗಳ ಪ್ರಯಾಣ ಭತ್ಯೆ 1 ಸಾವಿರ ರೂ.ಗಳಿಗೆ ಏರಿಸಬೇಕು, ಮರಳು ದಂಧೆಕೋರರಿಂದ ಸಾವಿಗೀಡಾದ ಸಾಹೇಬ್ ಪಾಟೀಲ್ ಅವರಿಗೆ 20 ಲಕ್ಷ ರೂ.ವಿಶೇಷ ಪರಿಹಾರ ನೀಡಬೇಕು, ಜಾಬ್‌ಚಾರ್ಟ್ ನೀಡಲು ಕ್ರಮವಹಿಸ ಬೇಕು,’’ ಎಂದು ಆಗ್ರಹಿಸಿದರು.

‘‘ಸರಕಾರ ತಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಬೆಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಅನಿರ್ದಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು,’’ ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಬಸವರಾಜು, ಜಿಲ್ಲಾ ಪ್ರಧಾನ ಕಾರ‌್ಯದರ್ಶಿ ಮಹೇಶ್, ಚಾಮರಾಜನಗರ ತಾಲೂಕು ಅಧ್ಯಕ್ಷ ರೇವಣ್ಣಘಿ, ಗುಂಡ್ಲುಪೇಟೆ ಘಟಕದ ತಾಲೂಕು ಅಧ್ಯಕ್ಷ ಮಹದೇವಪ್ಪಘಿ, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ನಟೇಶ್, ಯಳಂದೂರು ತಾಲೂಕು ಅಧ್ಯಕ್ಷ ಜಿ.ಎ.ಸತೀಶ್ ಸೇರಿದಂತೆ ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳು ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ