ಆ್ಯಪ್ನಗರ

ಅನುದಾನ ಕೊರತೆ: ಕ್ಯಾಂಟಿನ್‌ ಕಾಮಗಾರಿ ಸ್ಥಗಿತ

ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರ್ಮಾಣವಾಗುತ್ತಿದ್ದ ಕ್ಯಾಂಟಿನ್‌ ಕಾಮಗಾರಿ ಅಪೂರ್ಣಗೊಂಡಿದೆ.

Vijaya Karnataka 17 Mar 2019, 5:00 am
ಸಂತೇಮರಹಳ್ಳಿ : ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರ್ಮಾಣವಾಗುತ್ತಿದ್ದ ಕ್ಯಾಂಟಿನ್‌ ಕಾಮಗಾರಿ ಅಪೂರ್ಣಗೊಂಡಿದೆ.
Vijaya Karnataka Web grant deficit canine construction breakdown
ಅನುದಾನ ಕೊರತೆ: ಕ್ಯಾಂಟಿನ್‌ ಕಾಮಗಾರಿ ಸ್ಥಗಿತ


ಕುದೇರು ಗ್ರಾಮದಿಂದ ಯಲಕ್ಕೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 1.ಕಿ.ಮೀ ದೂರದಲ್ಲಿ ಕಾಲೇಜು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ವೇಳೆಯಲ್ಲಿ ಊಟ ಮಾಡಲು ಕುದೇರು ಗ್ರಾಮಕ್ಕೆ ಬಂದು ಹೋಗುವ ಸ್ಥಿತಿ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳ ಪರದಾಟವನ್ನು ತಪ್ಪಿಸುವ ಉದ್ದೇಶದ 2016-17 ನೇ ಸಾಲಿನಲ್ಲಿ ಮಾಜಿ ಶಾಸಕ ಎಸ್‌. ಜಯಣ್ಣ ಅವರ ಅವಧಿಯಲ್ಲಿ ಕ್ಯಾಂಟಿನ್‌ ನಿರ್ಮಾಣ ಮಾಡಿಕೊಡುವ ನಿಟ್ಟಿನಲ್ಲಿ ಮನವಿ ನೀಡಲಾಯಿತು. ಈ ಹಿನ್ನೆಲೆಯಲ್ಲಿ 5 ಲಕ್ಷ ರೂ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಕ್ಯಾಂಟಿನ್‌ ನಿರ್ಮಾಣ ಮಾಡುವ ಉದ್ದೇಶದಿಂದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಆ ವೇಳೆಯಲ್ಲಿ ಕಾಮಗಾರಿ ನಿರ್ವಹಣೆ ಹೊಂದಿದ್ದ ಗುತ್ತಿಗೆದಾರ ಕಾಮಗಾರಿ ಆರಂಭಿಸಿದ್ದರು.

ಆದರೆ ಕಾಮಗಾರಿ ಮಾತ್ರ ಕಾಂಕ್ರಿಟ್‌ ಹಂತಕ್ಕೆ ತಲುಪಿ ವರ್ಷದ ಹಿಂದೆ ಕಾಮಗಾರಿ ಸ್ಥಗಿತವಾಗಿದೆ. ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ಸಂಬಂಧಪಟ್ಟ ಗುತ್ತಿಗೆದಾರ ಬಳಿ ಮಾಹಿತಿ ಕೇಳಿದರೇ, ಅನುದಾನ ಎಷ್ಟು ಲಭ್ಯವಾಗಿತ್ತೋ ಅಷ್ಟು ಅನುದಾನದಲ್ಲಿ ಕಾಮಗಾರಿ ನಡೆಸಲಾಗಿದೆ. ಮತ್ತೆ ಅನುದಾನ ಬಿಡುಗಡೆಯಾದರೇ ಉಳಿಕೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ ಎನ್ನುವುದು ಸದ್ಯದ ಮಟ್ಟಿನ ಉತ್ತರ. ಈಗ ಕಾಮಗಾರಿ ಸ್ಥಗಿತವಾಗಿ ವರ್ಷವೇ ಕಳೆದಿರುವ ಪರಿಣಾಮ ಕಟ್ಟಡದ ಸುತ್ತಲೂ ನಾನಾ ಜಾತಿಯ ಗಿಡಗಳು ಬೆಳೆದು ನಿಂತು ಅನೈರ್ಮಲ್ಯ ತಾಣವಾಗಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಅಪೂರ್ಣಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂಬುದು ವಿದ್ಯಾರ್ಥಿಗಳ ಒತ್ತಾಯ.

ಕಾಲೇಜಿನಲ್ಲಿ ಪ್ರತ್ಯೇಕ ಕ್ಯಾಂಟಿನ್‌ ನಿರ್ಮಾಣ ಮಾಡುವ ಸಂಬಂಧ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಲೇಜು ಆವರಣದಲ್ಲೇ ಮಧ್ಯಾಹ್ನ ಹಾಗೂ ಬೆಳಗಿನ ಉಪಹಾರ ಕಡಿಮೆ ದರದಲ್ಲಿ ದೊರಕುತ್ತದೆ ಎನ್ನುವ ಭರವಸೆ ಹೊಂದಿದ್ದೆವು. ಆದರೆ ಕಟ್ಟಡ ಕಾಮಗಾರಿ ಅಪೂರ್ಣಗೊಂಡು ವರ್ಷವೇ ಕಳೆದಿದ್ದರೂ ಯಾರು ಇತ್ತ ಗಮನಹರಿಸಿಲ್ಲ.

-ಪ್ರಶಾಂತ್‌, ವಿದ್ಯಾರ್ಥಿ.

ಕಾಲೇಜಿನ ಆವರಣದಲ್ಲಿ ಪ್ರತ್ಯೇಕ ಕ್ಯಾಂಟಿನ್‌ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿರುವುದು ತಿಳಿದಿದೆ. ಕ್ಯಾಂಟಿನ್‌ ಕಟ್ಟಡ ಪೂರ್ಣಗೊಳಿಸಲು ಸಂಬಂಧಪಟ್ಟ ಕ್ಷೇತ್ರದ ಶಾಸಕರ ಗಮನಕ್ಕೆ ತಂದಿದ್ದೇವೆ. ಅವರು ನಮ್ಮ ಮನವಿಗೆ ಸ್ಪಂದಿಸಿ ಅನುದಾನ ಮಂಜೂರು ಮಾಡಿಸುವ ಕುರಿತು ಭರವಸೆ ನೀಡಿದ್ದಾರೆ.

-ಮಹದೇವಸ್ವಾಮಿ, ಪ್ರಾಂಶುಪಾಲರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ