ಆ್ಯಪ್ನಗರ

ಗೌರವಿಸುವ ಗುಣವಿದ್ದರೆ ಮಾನವ ಹಕ್ಕು ಉಲ್ಲಂಘನೆಗೆ ಕಡಿವಾಣ

ಮಾನವೀಯ ಮೌಲ್ಯಗಳ ಕುಸಿತದಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದೆ ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶರಾದ ಎಸ್‌.ಜೆ. ಕೃಷ್ಣ ತಿಳಿಸಿದರು.

Vijaya Karnataka 12 Dec 2018, 5:00 am
ಕೊಳ್ಳೇಗಾಲ : ಮಾನವೀಯ ಮೌಲ್ಯಗಳ ಕುಸಿತದಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದೆ ಎಂದು ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶರಾದ ಎಸ್‌.ಜೆ. ಕೃಷ್ಣ ತಿಳಿಸಿದರು.
Vijaya Karnataka Web human rights day
ಗೌರವಿಸುವ ಗುಣವಿದ್ದರೆ ಮಾನವ ಹಕ್ಕು ಉಲ್ಲಂಘನೆಗೆ ಕಡಿವಾಣ


ಪಟ್ಟಣದ ವಕೀಲರ ಸಂಘದ ಸಭಾಂಗಣದಲ್ಲಿ ಸೋಮವಾರ ವಿಶ್ವ ಮಾನವ ಹಕ್ಕುಗಳ ದಿನ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಸಹಯೋಗದೊಡನೆ ಆಯೋಜಿಸಿದ್ದ ಮಾನವ ಹಕ್ಕುಗಳು ಮತ್ತು ಮೂಲಭೂತ ಕಾಯಿದೆಗಳ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನುಷ್ಯರಿಗೆ ಜನ್ಮತಹ ಬರುವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆ. ಪ್ರತಿಯೊಬ್ಬ ವ್ಯಕ್ತಿಯೂ ಗೌರವದಿಂದ ಬದುಕು ನಡೆಸುವುದನ್ನು ರೂಢಿಸಿಕೊಳ್ಳಬೇಕು. ಇತರರನ್ನು ಗೌರವಿಸುವ ಗುಣವನ್ನು ಮೈಗೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ತಾರತಮ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ತಡೆ ಸಾಧ್ಯ. ನ್ಯಾಯ ನಿಷ್ಟೂರ ನಡೆ ಉಳ್ಳವರಾಗಬೇಕು. ಸತ್ಯ ಮತ್ತು ನ್ಯಾಯವನ್ನು ಎತ್ತಿ ಹಿಡಿಯುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾನೂನಿನ ಎದುರು ಎಲ್ಲರೂ ಸಮಾನರು ಮತ್ತು ಕಾನೂನಿನ ರಕ್ಷ ಣೆ ಎಲ್ಲರಿಗೂ ಸರಿಸಮನಾಗಿ ದೊರಕುವಂತಾಗಬೇಕು. ಮೂಲಭೂತ ಹಕ್ಕುಗಳನ್ನು ಗೌರವಿಸುವಂತೆ ಸಂವಿಧಾನದಲ್ಲಿ ಅಳವಡಿಸಲಾಗಿದೆ. ಸಂವಿಧಾನದಲ್ಲಿ ಮಾನವ ಹಕ್ಕುಗಳ ಕುರಿತು ನೀಡಲಾದ ಹಕ್ಕುಗಳನ್ನು ರಕ್ಷಿಸುವ ಹಿನ್ನೆಲೆಯಲ್ಲಿ ಸರಿಯಾಗಿ ಗೌರವಿಸದ ಹಾಗೂ ಜಾರಿಯಾಗದ ಹಿನ್ನೆಲೆಯಲ್ಲಿ ಮಾನವ ಹಕ್ಕುಗಳ ಕಾಯಿದೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ಹಿರಿಯ ವಕೀಲರಾದ ಡಿ. ವೆಂಕಟಾಚಲ, ಪ್ರತಿಯೊಬ್ಬ ಪ್ರಜೆಯೂ ತಮ್ಮ ನಿತ್ಯ ಜೀವನದಲ್ಲಿ ಹಾಸು ಹೊಕ್ಕಾಗಿರುವ ಮೂಲಭೂತ ಕಾನೂನುಗಳ ಬಗ್ಗೆ ಅರಿವನ್ನು ಹೊಂದುವ ಮಹತ್ವ ಮತ್ತು ಮೂಲಭೂತ ಕಾನೂನುಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಡಿ.ಎಸ್‌. ಬಸವರಾಜು ಕಾರ್ಯಕ್ರಮದ ಅಧ್ಯಕ್ಷ ತೆ ವಹಿಸಿ ಸಾರ್ವಜನಿಕರು ಮಾನವ ಹಕ್ಕುಗಳು ಸೇರಿದಂತೆ ಮೂಲಭೂತ ಕಾನೂನುಗಳು ಮತ್ತು ಕಾನೂನು ಸೇವೆಗಳ ಸಮಿತಿ ವತಿಯಿಂದ ದೊರೆಯುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಟಿ. ಶ್ರೀಕಾಂತ್‌, ವಕೀಲರ ಸಂಘದ ಕಾರ್ಯದರ್ಶಿ ಎನ್‌. ಬಸವರಾಜು, ಸಹಾಯಕ ಸರ್ಕಾರಿ ಅಭಿಯೋಜಕರಾದ ಎಂ. ನಾಗೇಶ್‌, ರೂಪಾ, ಹಿರಿಯ ವಕೀಲರಾದ ಎಸ್‌. ನಾಗರಾಜು, ಎನ್‌. ರಾಧಾಕೃಷ್ಣ, ನಿರ್ಮಲ ಮಧುಸೂದನ್‌, ಹೇಮಂತ್‌ ಕುಮಾರ್‌ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ