ಆ್ಯಪ್ನಗರ

ಮಹರ್ಷಿ ಭಾವಚಿತ್ರಕ್ಕೆ ಅಪಮಾನ : ಕಿಡಿಗೇಡಿಗಳ ಗಡಿಪಾರಿಗೆ ಆಗ್ರಹ

ತಾಲೂಕಿನ ಹಿರೇಬೇಗೂರು ಗ್ರಾಮದಲ್ಲಿ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಭಗೀರಥ ಯುವಸೇನೆ ಗರಡಿ ಮನೆ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

Vijaya Karnataka 29 Jul 2018, 5:00 am
ಚಾಮರಾಜನಗರ: ತಾಲೂಕಿನ ಹಿರೇಬೇಗೂರು ಗ್ರಾಮದಲ್ಲಿ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಭಗೀರಥ ಯುವಸೇನೆ ಗರಡಿ ಮನೆ ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
Vijaya Karnataka Web insult maharshi photo protest
ಮಹರ್ಷಿ ಭಾವಚಿತ್ರಕ್ಕೆ ಅಪಮಾನ : ಕಿಡಿಗೇಡಿಗಳ ಗಡಿಪಾರಿಗೆ ಆಗ್ರಹ


ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಬ್ಯಾನರ್‌ ಹಿಡಿದು ಮೆರವಣಿಗೆಯಲ್ಲಿ ತೆರಳಿದ ಹಿರೇಬೇಗೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಗ್ರಾಮದ ಉಪ್ಪಾರ ಸಮುದಾಯದವರು, ಭಗೀರಥ ಯುವಸೇನೆ ಗರಡಿ ಮನೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.

21 ವರ್ಷಗಳ ಕಾಲ ಒಂಟಿ ಕಾಲಲ್ಲಿ ನಿಂತು ತಪಸ್ಸು ಮಾಡಿ, ಶಿವನನ್ನು ಒಲಿಸಿಕೊಂಡು, ಧರೆಗೆ ಗಂಗೆಯನ್ನು ಕರೆತಂದ ಮಹಾನ್‌ ತಪಸ್ವಿ ಭಗೀರಥರು, ಅಂಥ ಮಹಾನ್‌ ದಾರ್ಶನಿಕರನ್ನು ಪ್ರತಿಯೊಬ್ಬರು ಇಂದು ಸ್ಮರಣೆ ಮಾಡಬೇಕಿದೆ, ಆದರೆ ಇಂಥ ಸಂದರ್ಭದಲ್ಲಿ ಹಿರಿಬೇಗೂರು ಗ್ರಾಮದಲ್ಲಿ ಶನಿವಾರ ರಾತ್ರಿ ಭಗೀರಥ ಮಹರ್ಷಿ ನಾಮಫಲಕದ ಭಾವಚಿತ್ರಕ್ಕೆ ದುಷ್ಕರ್ಮಿಗಳು ಅಪಮಾನ ಮಾಡಿದ್ದಾರೆ, ಮಹಾನ್‌ ದಾರ್ಶನಿಕರಿಗೆ ಅಪಮಾನ ಮಾಡುತ್ತಿರುವ ಘಟನೆಗಳು ಆಗಿಂದಾಗ್ಗೆ ನಡೆಯುತ್ತಿರುವುದು ವಿಷಾದನೀಯ ಎಂದು ಆರೋಪಿಸಿದರು.

ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಹಿಂದೆ ರಾಜಕೀಯ ಕುತಂತ್ರ ಅಡಗಿದೆ, ಇದರ ಹಿಂದೆ ಯಾರಾರ‍ಯರು ಇದ್ದಾರೋ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರನ್ನು ಪತ್ತೆಹಚ್ಚಿ ಬಂಧಿಸಬೇಕು, ಕೂಡಲೇ ಜಿಲ್ಲಾಡಳಿತ ತ್ವರಿತಗತಿಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು, ಮುಂದಿನ ದಿನಗಳಲ್ಲಿ ರಾಜ್ಯದಲ್ಲೆಡೆ ಇಂಥ ದುರ್ಘಟನೆಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್ಸಿ ಮೀಸಲು ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಬಾಗಳಿ ರೇವಣ್ಣ, ಮುಖಂಡರಾದ ಜಿ.ಎಂ.ಗಾಡ್ಕರ್‌, ಸುರೇಶ್‌ ವಾಜಪೇಯಿ, ಭಗೀರಥ ಯುವಸೇನೆ ಗರಡಿ ಮನೆ ಗೌರವಾಧ್ಯಕ್ಷ ಮಂಜುನಾಥ್‌, ರಾಜೇಂದ್ರ ಉಪ್ಪಾರ್‌, ಕೃಷ್ಣ, ಮಹೇಶ್‌, ನಟೇಶ್‌ ಸೇರಿದಂತೆ ಹಿರೇಬೇಗೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲ ಗ್ರಾಮದ ಉಪ್ಪಾರ ಸಮುದಾಯದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ