ಆ್ಯಪ್ನಗರ

ಕೆ.ಬಿ.ಸಿದ್ದಯ್ಯ ದಲಿತ ಸಂವೇದನಾಶೀಲ ಕವಿ

ಕವಿ ಡಾ.ಕೆ.ಬಿ.ಸಿದ್ದಯ್ಯ ಅವರು ದಲಿತ ಸಂವೇದನೆಯ ಅಲ್ಲಮ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುನಿರಾಜು ಹೇಳಿದರು.

Vijaya Karnataka 21 Oct 2019, 5:00 am
ಚಾಮರಾಜನಗರ: ಕವಿ ಡಾ.ಕೆ.ಬಿ.ಸಿದ್ದಯ್ಯ ಅವರು ದಲಿತ ಸಂವೇದನೆಯ ಅಲ್ಲಮ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮುನಿರಾಜು ಹೇಳಿದರು.
Vijaya Karnataka Web kb siddaiah is a dalit poet
ಕೆ.ಬಿ.ಸಿದ್ದಯ್ಯ ದಲಿತ ಸಂವೇದನಾಶೀಲ ಕವಿ


ನಗರದ ರೋಟರಿ ಭವನದಲ್ಲಿದಲಿತ ಸಂಘಟನೆಗಳ ಒಕ್ಕೂಟ, ರಂಗವಾಹಿನಿ ಸಂಸ್ಥೆ, ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ ಆಶ್ರಯದಲ್ಲಿದಲಿತ ಕವಿ ಡಾ.ಕೆ.ಬಿ.ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆಯಲ್ಲಿಡಾ.ಕೆ.ಬಿ.ಸಿದ್ದಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕವಿ ಡಾ.ಕೆ.ಬಿ.ಸಿದ್ದಯ್ಯ ಅವರು ಕೇವಲ ಕಾವ್ಯ, ಸಾಹಿತ್ಯ ಕ್ಷೇತ್ರಕ್ಕೆ ಸೀಮಿತವಾಗಿರದೇ ಸಾಮಾಜಿಕ ಹೋರಾಟಗಳಲ್ಲೂಮುಂಚೂಣಿಯಲ್ಲಿದ್ದರು. ಯಾವುದೇ ವಿಚಾರದಲ್ಲಿನಿಷ್ಠುರ, ನಿರ್ದಾಕ್ಷಿಣ್ಯವಾಗಿ ಮಾತನಾಡುತ್ತಿದ್ದರು. ಸಾಹಿತ್ಯ ಕಲಿಸಿದ್ದಾರೆ. ಸಂಘಟನೆ ಹೇಗೆ ಮಾಡಬೇಕು ಎಂಬುವುದನ್ನು ಹೇಳಿ ಕೊಟ್ಟಿದ್ದಾರೆ. ಪ್ರತಿನಿತ್ಯ ಚಳವಳಿ ಕುರಿತು ಮಾತನಾಡುತ್ತಿದ್ದರು. ಅವರ ಸಾಹಿತ್ಯ, ಕವನ ಹಾಗೂ ಬರಹಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿ ಶೋಷಿತ ಸಮುದಾಯವನ್ನು ಎಚ್ಚರಿಸುವ ಕೆಲಸ ಮಾಡಿದೆ ಎಂದರು.

ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಮಾತನಾಡಿ, ಕವಿ ಕೆ.ಬಿ.ಸಿದ್ದಯ್ಯ ಅವರು ಮಾನವ ಹೃದಯದ ಸಮಾಜ ಚಿಂತಕರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

12ನೇ ಶತಮಾನದಲ್ಲಿಬಸವಣ್ಣ ಅವರ ಅನುಭವ ಮಂಟಪದ ಅಲ್ಲಮಪ್ರಭುವಿನ ತರ 21ನೇ ಶತಮಾನದಲ್ಲಿಆಧುನಿಕ ಅಲ್ಲಮಪ್ರಭುವಾಗಿ ಪ್ರಸಿದ್ಧಿಯಾಗಿದ್ದರು. ಅವರ ನಿಧನದಿಂದ ಸಮಾಜಕ್ಕೆ, ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಠವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಮಾತನಾಡಿ, ನಾಡು ಕಂಡ ಉತ್ತಮ ದಲಿತ ಕವಿಗಳಲ್ಲಿಕೆ.ಬಿ.ಸಿದ್ದಯ್ಯ ಸಹ ಒಬ್ಬರು. ಅವರು ಸ್ನೇಹ ಜೀವಿಯಾಗಿದ್ದರು ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಸಂಚಾಲಕ ಸಿ.ಎಂ. ಕೃಷ್ಣಮೂರ್ತಿ ಮಾತನಾಡಿ, ಕೆ.ಬಿ.ಸಿದ್ದಯ್ಯ ಅವರು ಪ್ರಾಮಾಣಿಕ ಹೋರಾಟಗಾರರು. ದಲಿತ ಸಂಘರ್ಷ ಸಮಿತಿ ಹುಟ್ಟು ಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಸಭೆಯಲ್ಲಿಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್‌.ನಾಗಯ್ಯ, ದಲಿತ ಸಂಘರ್ಷ ಸಮಿತಿ ಜಿಲ್ಲಾಸಂಯೋಜಕ ಕೆ.ಎಂ.ನಾಗರಾಜು, ಜಿಲ್ಲಾಸಂಚಾಲಕ ಯರಿಯೂರು ರಾಜಣ್ಣ, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಎಂ.ಶಿವಮೂರ್ತಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಬಸವನಪುರ ರಾಜಶೇಖರ್‌, ಈಶ್ವರ್‌ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ