ಆ್ಯಪ್ನಗರ

ಕೆರೆಗಳ ಒತ್ತುವರಿ ತೆರವುಗೊಳಿಸಿ

ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಸೂಚನೆ ನೀಡಿದರು.

Vijaya Karnataka 9 Feb 2020, 5:00 am
ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌. ರವಿ ಸೂಚನೆ ನೀಡಿದರು.
Vijaya Karnataka Web ಚಾಮರಾಜನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿನಡೆದ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ಸಂಬಂಧ ನಡೆದ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮಾತನಾಡಿದರು.


ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ಸಂಬಂಧ ನಡೆದ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

''ಕೆರೆಗಳು ಅಂತರ್ಜಲದ ಮೂಲವಾಗಿದ್ದು, ಅವುಗಳನ್ನು ಅಭಿವೃದ್ಧಿಪಡಿಸಿ ಕೆರೆಗಳಿಗೆ ತ್ಯಾಜ್ಯ ಹಾಗೂ ಮಾಲಿನ್ಯ ನೀರು ಸೇರದಂತೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ಕ್ರಮ ವಹಿಸಿ ಅಂತರ್ಜಲದ ಮಟ್ಟವನ್ನು ಹೆಚ್ಚಿಸಲು ಪ್ರಾಮುಖ್ಯತೆ ನೀಡಬೇಕು. ಕೆರೆಗಳಲ್ಲಿಸದಾಕಾಲ ನೀರಿದ್ದರೆ ಬೇಸಿಗೆಯಲ್ಲಿಯೂ ಸಹ ನೀರಿನ ಅಭಾವದಿಂದ ಹೊರಬರಬಹುದಾಗಿದೆ,'' ಎಂದರು.

''ಜಿಲ್ಲೆಯು 580 ಕೆರೆಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ವೈಜ್ಞಾನಿಕವಾಗಿ ಸಂರಕ್ಷಿಸುವ ಕಾರ್ಯ ಆಗಬೇಕಿದೆ. ಎಲ್ಲಾತಾಲೂಕು ಕೇಂದ್ರ ಹಾಗೂ ನಗರ ಪ್ರದೇಶದ ಕೆರೆಗಳಿಗೆ ಸಂಬಂಧಪಟ್ಟ ಮಾಲೀಕತ್ವದ ದಾಖಲೆಗಳಲ್ಲಿವಿಸ್ತೀರ್ಣ ಮತ್ತು ಅಳತೆಯಲ್ಲಿವ್ಯತ್ಯಾಸ ಕಂಡು ಬಂದಿದ್ದು, ಮುಂದಿನ ಸಭೆಯಲ್ಲಿಸೂಕ್ತ ದಾಖಲೆಗಳನ್ವಯ ಸರ್ವೇ ಮಾಡಿಸಿ ಮಾಲೀಕತ್ವದ ವಿವರಗಳನ್ನು ಕಟ್ಟುನಿಟ್ಟಾಗಿ ದಾಖಲಿಸಬೇಕು,'' ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

''ಪ್ರತಿ ತಾಲೂಕುಗಳ ತಹಸೀಲ್ದಾರ್‌ ಅವರ ಅಧ್ಯಕ್ಷತೆಯಲ್ಲಿಎ.ಡಿ.ಎಲ್‌.ಆರ್‌, ಕಾವೇರಿ ನೀರಾವರಿ ನಿಗಮ, ಸಣ್ಣ ನೀರಾವರಿ ಇಲಾಖೆಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಕೆರೆಗಳ ಅಭಿವೃದ್ಧಿಗೆ ಕ್ರಮ ವಹಿಸಬೇಕು, ಗ್ರಾಮ ಹಾಗೂ ತಾಲೂಕು ಹಂತದಲ್ಲಿಯೇ ಕೆರೆಗಳ ಸರ್ವೇ ಕಾರ್ಯವು ಸ್ಪಷ್ಟವಾದ ಅಂಕಿ-ಅಂಶಗಳಿಂದ ಕೂಡಿರಬೇಕು, ಜಿಲ್ಲೆಯ 5 ತಾಲೂಕುಗಳ ಕೆರೆಗಳಿಗೆ ಸಂಬಂಧ ಪಟ್ಟ ಸರ್ವೇ ಕಾರ್ಯವು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು,'' ಎಂದು ತಿಳಿಸಿದರು.

''ಕೆರೆಗಳ ಮಾಲಿನ್ಯದಿಂದ ಪರಿಸರಕ್ಕೆ ಹಾನಿಯಾಗುವುದು ಕಂಡುಬಂದಲ್ಲಿಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು,'' ಎಂದು ಎಚ್ಚರಿಸಿದರು.

ಜಿಪಂ ಉಪ ಕಾರ್ಯದರ್ಶಿ ಧರಣೇಶ್‌, ಜಿಲ್ಲಾನಗರಾಭಿವೃದ್ಧಿ ಕೋಶಾಧಿಕಾರಿ ಸುರೇಶ್‌, ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಎಂ.ಜಿ. ರಘುರಾಮ್‌, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ.ಎಸ್‌. ಪಂಕಜ, ನಾನಾ ಇಲಾಖೆಯ ಜಿಲ್ಲಾಮತ್ತು ತಾಲೂಕು ಮಟ್ಟದ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ