ಆ್ಯಪ್ನಗರ

ಖಾಸಗಿ ಬಸ್ಟ್ಯಾಂಡ್‌ ಉದ್ಘಾಟನೆಗೆ ದಿನಗಣನೆ

ನಗರದ ಬಹು ನಿರೀಕ್ಷಿತ ಖಾಸಗಿ ಬಸ್‌ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

Vijaya Karnataka 24 Dec 2019, 5:00 am
ಹರವೆ ಮಹೇಶ್‌ ಚಾಮರಾಜನಗರ
Vijaya Karnataka Web Private Bustand


ನಗರದ ಬಹು ನಿರೀಕ್ಷಿತ ಖಾಸಗಿ ಬಸ್‌ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ, ಸಂತೇಮರಹಳ್ಳಿ, ತಾಳವಾಡಿ ಸೇರಿದಂತೆ ನಾನಾ ಕಡೆಯಿಂದ 80ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಸಂಚರಿಸುತ್ತವೆ.

10 ವರ್ಷಗಳ ಹಿಂದೆ ಅಂದಿನ ಜಿಲ್ಲಾಧಿಕಾರಿಯಾಗಿದ್ದ ಹರ್ಷಗುಪ್ತ ನಗರದ ಮಾರಿಗುಡಿ ಆವರಣದಲ್ಲಿದ್ದ ಖಾಸಗಿ ಬಸ್‌ ನಿಲ್ದಾಣವನ್ನು ಈಗಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಜಿಲ್ಲಾಕ್ರೀಡಾಂಗಣದ ಸಮೀಪ ಸ್ಥಳಾಂತರ ಮಾಡಿದ್ದರು. ಪ್ರಯಾಣಿಕರು ಕುಳಿತು ವಿಶ್ರಮಿಸಿಕೊಳ್ಳಲು ಪ್ಲಾಟ್‌ಫಾರಂ ನಿರ್ಮಾಣ ಮಾಡಲಾಗಿತ್ತು. ಆದರೆ, ನಿಲ್ದಾಣ ಸಮರ್ಪಕವಾಗಿ ಅಭಿವೃದ್ಧಿಯಾಗದ ಪರಿಣಾಮ ಹಳ್ಳಕೊಳ್ಳ ಬಿದ್ದು, ಮಳೆ ಬಂದರೆ ನೀರು ನಿಂತು ಹೊರಗಡೆಯಿಂದ ಬಂದ ಪ್ರಯಾಣಿಕರು ಬಸ್‌ ಹತ್ತಲು ಹರಸಾಹಸ ಮಾಡುವಂತಾಗಿತ್ತು. ಅಂಗಡಿ ಮುಂಗಟ್ಟುಗಳ ಮುಂದೆ ಕೆರೆಯಂತೆ ನಿಂತು ವ್ಯಾಪಾರಸ್ಥರು ವಸ್ತುಗಳನ್ನು ಮಾರಾಟ ಮಾಡಲು ಸಮಸ್ಯೆಯಾಗಿತ್ತು.

ಬಸ್‌ ನಿಲ್ದಾಣದ ಅವ್ಯವಸ್ಥೆ ಕುರಿತು ನಗರಸಭೆ ಸಾಮಾನ್ಯ ಸಭೆ ಸಂದರ್ಭದಲ್ಲೂಸಾಕಷ್ಟು ಚರ್ಚೆಯಾಗುತ್ತಿತ್ತು. ಈ ಹಿನ್ನೆಲೆ ನಗರದ ನಾನಾ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡುವ ಮೂಲಕ ಮೂರು ವರ್ಷದ ಹಿಂದೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಆ ಅನುದಾನದಲ್ಲಿ2.50 ಕೋಟಿ ರೂ. ಬಸ್‌ ನಿಲ್ದಾಣದ ಅಭಿವೃದ್ಧಿಗೆ ಮೀಸಲಿಡಲಾಗಿತ್ತು. ಇದೀಗ ಬಸ್‌ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

ಪಿಡಬ್ಲುತ್ರ್ಯಡಿಗೆ ಹೊಣೆ: ಬಸ್‌ ನಿಲ್ದಾಣ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿತ್ತು. ಲೋಕಸಭೆ ಚುನಾವಣೆ ಸಂದರ್ಭದಲ್ಲಿಕಾಮಗಾರಿ ಪಿಲ್ಲರ್‌ ನಿರ್ಮಾಣಕ್ಕೆ ಮಾತ್ರ ಸೀಮಿತವಾಗಿತ್ತು. ನಂತರ ನಾಲ್ಕೆತ್ರೖದು ತಿಂಗಳಿಂದ ಕಾಮಗಾರಿ ಬಿರುಸುಗೊಂಡಿತು. ಪ್ರಸ್ತುತ ಬಸ್‌ ನಿಲ್ದಾಣದಲ್ಲಿಒಂದೂವರೆ ಅಡಿ ಕಾಂಕ್ರಿಟ್‌ ಅಳವಡಿಸಲಾಗಿದ್ದು, ಒಂದು ಕಡೆ 11ರಂತೆ ಎರಡು ಕಡೆ 22 ಬಸ್‌ಗಳು ನಿಲ್ಲುವ ವ್ಯವಸ್ಥೆ ಮಾಡಲಾಗಿದೆ. ನಗರಸಭೆ ವತಿಯಿಂದ ಮಳೆ ನೀರಿನ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.

ಜಿಲ್ಲಾಉಸ್ತುವಾರಿ ಸಚಿವರಾದ ಎಸ್‌.ಸುರೇಶ್‌ಕುಮಾರ್‌ ಅವರು ನಗರಕ್ಕೆ ಭೇಟಿ ನೀಡಿದ್ದು, ನಾನಾ ಕಾಮಗಾರಿ ಪರಿಶೀಲನೆ ವೇಳೆ ಖಾಸಗಿ ಬಸ್‌ ನಿಲ್ದಾಣಕ್ಕೂ ಭೇಟಿ ನೀಡಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲು ಕ್ರಮವಹಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರು. ಆ ಸಂದರ್ಭ ಕೆಲ ಕಾಮಗಾರಿಗಳು ಪೂರ್ಣಗೊಂಡಿರಲಿಲ್ಲ. ಇದೀಗ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳಲ್ಲಿಬಸ್‌ ನಿಲ್ದಾಣ ಲೋಕಾರ್ಪಣೆಯಾಗಲಿದೆ ಎನ್ನುತ್ತಾರೆ ನಗರಸಭೆ ಅಧಿಕಾರಿಗಳು.

ಮುಖ್ಯಮಂತ್ರಿಗಳ ವಿಶೇಷಾನುದಾನ 50 ಕೋಟಿ ರೂ. ಪೈಕಿ 2.50 ಕೋಟಿ ರೂ.ಗಳನ್ನು ನಗರದ ಖಾಸಗಿ ಬಸ್‌ ನಿಲ್ದಾಣದ ಅಭಿವೃದ್ಧಿಗೆ ಮೀಸಲಿಡಲಾಗಿತ್ತು. ಕಾಮಗಾರಿ ಪೂರ್ಣಗೊಂಡಿದ್ದು, ನಗರಸಭೆ ವತಿಯಿಂದ ಮಳೆ ನೀರು ಚರಂಡಿ ನಿರ್ಮಿಸಲಾಗುತ್ತಿದೆ. ಬಸ್‌ ನಿಲ್ದಾಣವನ್ನು ನಗರಸಭೆಗೆ ಹಸ್ತಾಂತರಿಸಿದ ತಕ್ಷಣ ಉದ್ಘಾಟನೆ ಪ್ರಕ್ರಿಯೆ ಆರಂಭಿಸಲಾಗುವುದು.

-ಎಂ.ರಾಜಣ್ಣ, ನಗರಸಭೆ ಆಯುಕ್ತ, ಚಾಮರಾಜನಗರ

ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿರುವ ಖಾಸಗಿ ಬಸ್‌ ನಿಲ್ದಾಣಕ್ಕೆ ಅಭಿವೃದ್ಧಿಯ ಕಾಯಕಲ್ಪ ದೊರೆತಿದ್ದು, ಆದಷ್ಟು ಬೇಗ ಲೋಕಾರ್ಪಣೆಗೆ ಮಾಡಬೇಕು. ಉದ್ಘಾಟನೆಯಾದ ನಂತರ ಅದರ ಸಮರ್ಪಕ ನಿರ್ವಹಣೆ ಮಾಡಬೇಕು.

-ಮಹೇಂದ್ರ, ಚಾಮರಾಜನಗರ


ಕಾಮಗಾರಿಯ ವಿವರ

ತಲಾ 11ರಂತೆ 22 ಬಸ್‌ಗಳು ನಿಲ್ಲುವ ವ್ಯವಸ್ಥೆ

ಕಾಮಗಾರಿ ಪೂರ್ಣಗೊಳಿಸುವ ಅವಧಿ- 8 ತಿಂಗಳು

ಕಾಮಗಾರಿ ನಿರ್ಮಾಣ ವೆಚ್ಚ 2.50 ಕೋಟಿ ರೂ.

ಪ್ರತಿದಿನ ನಾನಾ ಕಡೆಯಿಂದ 80ಕ್ಕೂ ಹೆಚ್ಚು ಬಸ್‌ಗಳ ಆಗಮನ

ಶೌಚಾಲಯ, ತೊಂಬೆಯಿಂದ ಕುಡಿಯುವ ನೀರಿನ ವ್ಯವಸ್ಥೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ