ಆ್ಯಪ್ನಗರ

ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ

ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸತ್ತೇಗಾಲ ಹ್ಯಾಂಡ್‌ ಪೋಸ್ಟ್‌ ಸಮೀಪದ ಗವಿರಾಯಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹನುಮಂತರಾಯನ ಹಳ್ಳದಲ್ಲಿ ನಡೆದಿದೆ.

Vijaya Karnataka 23 Jun 2019, 5:00 am
ಕೊಳ್ಳೇಗಾಲ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸತ್ತೇಗಾಲ ಹ್ಯಾಂಡ್‌ ಪೋಸ್ಟ್‌ ಸಮೀಪದ ಗವಿರಾಯಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹನುಮಂತರಾಯನ ಹಳ್ಳದಲ್ಲಿ ನಡೆದಿದೆ.
Vijaya Karnataka Web lovers suicide by consuming poison
ವಿಷ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ


ಉಗನಿಯ ಗ್ರಾಮದ ಸಂಗೀತಾ(17) ಮತ್ತು ಕಿರಣ್‌(23) ಮೃತರು. ಇವರು ಒಂದೇ ಬೀದಿಯ ಅಕ್ಕಪಕ್ಕದ ಮನೆಯವರು. ಸಂಗೀತಾ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಿರಣ್‌ ಸಿಲ್ಕ್‌ ರೀಲಿಂಗ್‌ ಕೆಲಸ ಮಾಡುತ್ತಿದ್ದ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯವರ ವಿರೋಧ ಇದ್ದ ಕಾರಣ ಇವರಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರು ಜೂ.18 ರಿಂದಲೇ ಕಾಣೆಯಾಗಿದ್ದರು. ಗವಿರಾಯಸ್ವಾಮಿ ದೇವಸ್ಥಾನದ ತಪ್ಪಲಿನಲ್ಲಿ ವಿಷ ಕುಡಿದು ಪಕ್ಕದ ಹಳ್ಳದ ನೀರಿನೊಳಗೆ ಬಿದ್ದಿದ್ದು ಶವಗಳು ಕೊಳೆತ ಸ್ಥಿತಿಯಲ್ಲಿ ಇದ್ದವು. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ