ಆ್ಯಪ್ನಗರ

ಮ.ಬೆಟ್ಟ: 100 ಎಕರೆ ಅರಣ್ಯ ಬೆಂಕಿಗಾಹುತಿ

ಮಲೆ ಮಹದೇಶ್ವರ ಬೆಟ್ಟದ ಕಾವೇರಿ ವನ್ಯಧಾಮ ಮತ್ತು ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡು 100 ಎಕರೆಗೂ ಹೆಚ್ಚು ಅರಣ್ಯ ಆಹುತಿಯಾಗಿದೆ.

Vijaya Karnataka 30 Mar 2019, 5:00 am
ಹನೂರು : ಮಲೆ ಮಹದೇಶ್ವರ ಬೆಟ್ಟದ ಕಾವೇರಿ ವನ್ಯಧಾಮ ಮತ್ತು ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡು 100 ಎಕರೆಗೂ ಹೆಚ್ಚು ಅರಣ್ಯ ಆಹುತಿಯಾಗಿದೆ.
Vijaya Karnataka Web CHN-CHN29HNR3


ಕಾವೇರಿ ವನ್ಯಜೀವಿಧಾಮದ ಅಸ್ತೂರು ಗಸ್ತು ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮದ ಬೋಳಿ ಬೆಟ್ಟ ಅರಣ್ಯ ಪ್ರದೇಶ ಸುಟ್ಟು ಹೋಗಿದೆ. ಜೋರಾಗಿ ಬೀಸುವ ಗಾಳಿ ಮತ್ತು ಬಿಸಿಲಿನ ತಾಪದಿಂದ ಬೆಂಕಿ ಹರಡುತ್ತಿದ್ದು ದಟ್ಟ ಹೊಗೆ ಆವರಿಸಿದೆ. ಅಸ್ತೂರು ಗಸ್ತಿನಲ್ಲಿ ಒಣಗಿದ ಹುಲ್ಲು ಮತ್ತು ಮರಗಿಡಗಳು ಸುಟ್ಟು ಹೋಗಿದ್ದರೆ, ಹೆಚ್ಚು ಬಿದಿರು ಹೊಂದಿರುವ ಬೋಳಿ ಬೆಟ್ಟ ಪ್ರದೇಶ ಹೊತ್ತಿ ಉರಿದಿದೆ.

ಸ್ಥಳದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ, ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಗ್ರಾಮಸ್ಥರು ಸೇರಿದಂತೆ ಒಟ್ಟು 20 ಮಂದಿ ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಜತೆಯಲ್ಲಿ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವಿಭಾಗೀಯ ಅರಣ್ಯ ಸಂರಕ್ಷ ಣಾಧಿಕಾರಿ ಏಡುಕೊಂಡಲು ಹಾಗೂ ಕಾವೇರಿ ವನ್ಯಜೀವಿಧಾಮದ ವಿಭಾಗೀಯ ಅರಣ್ಯ ಸಂರಕ್ಷ ಣಾಧಿಕಾರಿ ರಮೇಶ್‌, ವಲಯಾರಣ್ಯಾಧಿಕಾರಿಗಳು ಹಾಜರಿದ್ದು, ಬೆಂಕಿ ನಂದಿಸಲು ಪ್ರಯಾಸ ಪಡುತ್ತಿದ್ದಾರೆ.

ಕಳೆದ 2 ದಿನಗಳಿಂದ ಬೋಳಿ ಬೆಟ್ಟದ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿಸಿಲಿನ ತಾಪ ಮತ್ತು ಗಾಳಿಗೆ ಬೆಂಕಿಯ ಜ್ವಾಲೆ ವೇಗವಾಗಿ ಹರಡಿ ಗುರುವಾರ 100 ಎಕರೆಗೂ ಹೆಚ್ಚು ಅರಣ್ಯ ಬೆಂದು ಹೋಗಿದೆ. ಬೆಂಕಿಯು ಮಲೆ ಮಹದೇಶ್ವರ ಬೆಟ್ಟದತ್ತ ಆವರಿಸುತ್ತಿದೆ. ಯಾರು ಬೆಂಕಿ ಹಚ್ಚಿದ್ದಾರೆ ಎಂಬುದು ಗೊತ್ತಾಗಿಲ್ಲ. ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇನ್ನು 3-4 ದಿನಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿಭಾಗೀಯ ಅರಣ್ಯ ಸಂರಕ್ಷ ಣಾಧಿಕಾರಿ ಏಡುಕೊಂಡಲು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ