ಆ್ಯಪ್ನಗರ

ಮಹಾನ್ ವ್ಯಕ್ತಿಗಳ ಜೀವನಾದರ್ಶ ಮೈಗೂಡಿಸಿಕೊಳ್ಳಿ

ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯ ಮಂತ್ರಿ ದಿ.ಡಿ.ದೇವರಾಜ ಅರಸು ಅವರ ಜನ್ಮದಿನ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

Vijaya Karnataka 21 Aug 2019, 9:23 pm
ಚಾಮರಾಜನಗರ: ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯ ಮಂತ್ರಿ ದಿ.ಡಿ.ದೇವರಾಜ ಅರಸು ಅವರ ಜನ್ಮದಿನ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
Vijaya Karnataka Web CHN-CHN21HM1


ಇಬ್ಬರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನೆರವೇರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ,‘‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು 8ವರ್ಷಗಳ ಸುಧೀರ್ಘ ರಾಜಕಾರಣ ನಡೆಸಿ, ಭೂಸುಧಾರಣೆ, ಮಾಜಿಪ್ರಧಾನಿ ಇಂದಿರಾಗಾಂಧಿ ಅವರು ಜಾರಿಗೆ ತಂದ 20 ಅಂಶಗಳ ಕಾರ‌್ಯಕ್ರಮಗಳನ್ನು ರಾಜ್ಯದಲ್ಲೂ ಜಾರಿ ಮಾಡಿದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ,’’ಎಂದರು.

ಮಾಜಿ ಶಾಸಕ ಎ.ಆರ್.ಕಷ್ಣಮೂರ್ತಿ ಮಾತನಾಡಿ, ‘‘ದೇವರಾಜು ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ದಲಿತರು ಶೋಷಿತರು, ಹಿಂದುಳಿದವರನ್ನು ರಾಜಕೀಯವಾಗಿ ಮುಂದೆ ತರಲು ಸಾಕಷ್ಟು ಶ್ರಮಿಸಿದರು. ಪ್ರಧಾನ ಮಂತ್ರಿಯಾಗಿದ್ದ ರಾಜೀವ್‌ಗಾಂಧಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತುಕೊಟ್ಟು, ಯುವಕರಿಗೆ ಮತದಾನದ ಹಕ್ಕನ್ನು ಅನುಷ್ಠಾನ ಮಾಡಿದರು. ಇಂತಹ ಮಹಾನ್ ವ್ಯಕ್ತಿಗಳ ಜೀವನಾದರ್ಶಗಳನ್ನು ಮೈಗೂಡಿಸಿಕೂಂಡು ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು,’’ ಎಂದು ಸಲಹೆ ನೀಡಿದರು,

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿ.ಪಂ.ಅಧ್ಯಕ್ಷೆ ಶಿವಮ್ಮ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ ರವಿಕುಮಾರ್ ಕೆಪಿಸಿಸಿ ಸದಸ್ಯ ಸೈಯದ್ ರಫಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ ಮಹಮದ್ ಅಸ್ಗರ್ (ಮುನ್ನಾ) ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕ ಮಹದೇವ್, ಆರ್.ಮಹದೇವ್, ತಾಪಂ ಸದಸ್ಯರಾದ ಕುಮಾರ್‌ನಾಯಕ್ ಮಹದೇವಶೆಟ್ಟಿ, ನಗರಸಭೆ ಸದಸ್ಯೆ ಭಾಗ್ಯಮ್ಮ, ಚುಡಾ ಮಾಜಿ ಅಧ್ಯಕ್ಷ ಸುಹೇಲ್‌ಖಾನ್, ಜಯಸಿಂಹ, ಶಕುಂತಲಾ, ನಾಗಶ್ರೀ, ತಾಪಂ ಮಾಜಿ ಸದಸ್ಯ ಶಿವಸ್ವಾಮಿ, ಕಾಗಲವಾಡಿ ಚಂದ್ರುಘಿ, ನಗರಸಭೆ ಮಾಜಿ ಸದಸ್ಯರಾದ ಮಹದೇವಯ್ಯ, ಅತೀಕ್ ಅಹಮ್ಮದ್, ಜಿ.ಪಂ.ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ ಕಾಂತರಾಜು, ನಸ್ರುಲ್‌ಖಾನ್, ರವಿ, ಆಯುಬ್‌ಖಾನ್, ಎಂಸ್ವಾಮಿ ಕಂದಹಳ್ಳಿ ನಾರಾಯಣ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ