ಆ್ಯಪ್ನಗರ

ಜಾಲತಾಣದಲ್ಲಿ ಶಾಸಕರ ಅವಹೇಳನ: ವ್ಯಕ್ತಿ ಸೆರೆ

ಆರೋಪಿ ಯುವಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದ ಎನ್ನಲಾಗಿದೆ.

Vijaya Karnataka 28 Jul 2019, 7:51 am
ಚಾಮರಾಜನಗರ: ಉಪ್ಪಾರ ಸಮುದಾಯ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಾನೆ ಎನ್ನಲಾದ ವ್ಯಕ್ತಿಯೊಬ್ಬನನ್ನು ಪಟ್ಟಣ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Vijaya Karnataka Web Arrest


ತಾಲೂಕಿನ ಆಲೂರು ಗ್ರಾಮದ ಎಂ.ಚಂದ್ರಶೇಖರ್‌ ಬಂಧಿತ ವ್ಯಕ್ತಿ. ಈತ ಫೇಸ್‌ಬುಕ್‌ನಲ್ಲಿ ಉಪ್ಪಾರ ಸಮಾಜ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಈ ವಿಷಯ ತಿಳಿದ ಸಮಾಜದ ಯುವಕರು ಚಂದ್ರಶೇಖರ್‌ ಕೆಲಸ ಮಾಡುತ್ತಿದ್ದ ಸಂತೇಮರಹಳ್ಳಿ ರಸ್ತೆಯಲ್ಲಿರುವ ಟ್ರ್ಯಾಕ್ಟರ್‌ ಷೋ ರೂಂಗೆ ತೆರಳಿ ಆತನನ್ನು ಪ್ರಶ್ನಿಸಿದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಆ ವೇಳೆ ಚಂದ್ರಶೇಖರ್‌ ಬೈಕ್‌ ಅನ್ನು ಜಖಂಗೊಳಿಸಿ ಆತನ ಮೇಲೆ ಹಲ್ಲೆ ನಡೆಸಲು ಮುಂದಾದರು ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವೃತ್ತ ನಿರೀಕ್ಷ ಕ ನಾಗೇಗೌಡ ಚಂದ್ರಶೇಖರ್‌ನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಈ ಸಂದರ್ಭದಲ್ಲಿ ಉಪ್ಪಾರ ಸಮುದಾಯದವರು ಚಂದ್ರಶೇಖರ್‌ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಘಟನೆ ಹಿನ್ನೆಲೆಯಲ್ಲಿ ಸಂತೇಮರಹಳ್ಳಿ ವೃತ್ತದಲ್ಲಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯವುಂಟಾಗಿತ್ತು. ಜಿಲ್ಲಾ ಉಪ್ಪಾರ ಯುವಕ ಸಂಘದ ಅಧ್ಯಕ್ಷ ಜಯಕುಮಾರ್‌ ಪಟ್ಟಣಠಾಣೆಗೆ ದೂರು ನೀಡಿದ್ದಾರೆ. ಚಂದ್ರಶೇಖರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಟ್ಟಣ ಠಾಣೆ ವೃತ್ತ ನಿರೀಕ್ಷ ಕ ನಾಗೇಗೌಡ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ