ಆ್ಯಪ್ನಗರ

ಮಂಜುನಾಥ್‌ಗೆ ಶ್ರದ್ಧ್ದಾಂಜಲಿ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾಗಿದ್ದ ವಿಧಾನ ಪರಿಷತ್ ಸದಸ್ಯ ಮಾಜಿ ಎನ್.ಮ.ಂಜುನಾಥ್ ನಿಧನ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧ್ದಾಂಜಲಿ ಸಭೆ ನಡೆಯಿತು.

ವಿಕ ಸುದ್ದಿಲೋಕ 18 Mar 2017, 5:15 am
ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾಗಿದ್ದ ವಿಧಾನ ಪರಿಷತ್ ಸದಸ್ಯ ಮಾಜಿ ಎನ್.ಮ.ಂಜುನಾಥ್ ನಿಧನ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧ್ದಾಂಜಲಿ ಸಭೆ ನಡೆಯಿತು.
Vijaya Karnataka Web manjunathge sraddhdanjali
ಮಂಜುನಾಥ್‌ಗೆ ಶ್ರದ್ಧ್ದಾಂಜಲಿ


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಹಿರಿಯ ರಾಜಕಾರಣಿ ದಿ. ಟಿ.ಎನ್. ನರಸಿಂಹ ಮೂರ್ತಿ ಅವರ ಪುತ್ರರಾಗಿದ್ದ ಎನ್. ಮಂಜುನಾಥ್ ಅವರು ಪಕ್ಷ ಸಂಘಟನೆ ಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಜತೆಗೆ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಜಿಲ್ಲೆಗೆ ಉತ್ತಮ ಸೇವೆ ನೀಡಿದ್ದರು.

ಪಕ್ಷದ ಪರಿಶಿಷ್ಟ ಜಾತಿ ವಿಭಾಗದಲ್ಲಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅವರ ಅಕಾಲಿಕ ನಿಧನದಿಂದ ಪಕ್ಷ ಸಂಘಟನೆಗೆ ಹಿನ್ನೆಡೆಯಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.
ಎಪಿಎಂಸಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ, ರಾಜಕೀಯ ಕುಟುಂಬದ ಹಿನ್ನೆಲೆಯಲ್ಲಿ ಗುರುತಿಸಿ ಕೊಂಡಿದ್ದ ಎನ್. ಮಂಜುನಾಥ್ ಜನರ ನಡುವೆ ಇದ್ದು ಪಕ್ಷ ಹಾಗೂ ಸಮಾಜದ ಸಂಘಟನೆಯಲ್ಲಿ ತೊಡಗಿಸಿಕೊಂಡು ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು ಎಂದು ಬಣ್ಣಿಸಿದರು.

ಸಭೆಯಲ್ಲಿ ಜಿಪಂ.ಅಧ್ಯಕ್ಷ ಎಂ. ರಾಮಚಂದ್ರ, ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಎಂ.ಚಿನ್ನಸ್ವಾಮಿ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ. ನಾಗರಾಜು, ನಗರಸಭೆ ಅಧ್ಯಕ್ಷೆ ರೇಣುಕಾ, ಸದಸ್ಯ ಎ.ಎಚ್.ಎನ್. ಖಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್, ಚುಡಾ ಮಾಜಿ ಅಧ್ಯಕ್ಷ ಸೈಯದ್ ರಫಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ