ಆ್ಯಪ್ನಗರ

ಕೃಷಿಕರ ಜೀವನಮಟ್ಟ ಸುಧಾರಿಸಲು ಶ್ರಮಿಸಿದ ಬಾಬೂಜೀ

ಕೃಷಿಕರ ಜೀವನಮಟ್ಟ ಸುಧಾರಿಸಲು ಹಸಿರು ಕ್ರಾಂತಿ ಯೋಜನೆ ಅನುಷ್ಠಾನ ಮಾಡಿದ ಬಾಬು ಜಗಜೀವನ್‌ರಾಂ ಮುಂಬರುವ ಎಲ್ಲ ಕಾಲಕ್ಕೂ ಪ್ರಸ್ತುತವಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು.

Vijaya Karnataka 7 Jul 2019, 5:00 am
ಚಾಮರಾಜನಗರ: ಕೃಷಿಕರ ಜೀವನಮಟ್ಟ ಸುಧಾರಿಸಲು ಹಸಿರು ಕ್ರಾಂತಿ ಯೋಜನೆ ಅನುಷ್ಠಾನ ಮಾಡಿದ ಬಾಬು ಜಗಜೀವನ್‌ರಾಂ ಮುಂಬರುವ ಎಲ್ಲ ಕಾಲಕ್ಕೂ ಪ್ರಸ್ತುತವಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಭಿಪ್ರಾಯಪಟ್ಟರು.
Vijaya Karnataka Web CHN-CHN06UM2


ನಗರದ ಜಿಲ್ಲಾಡಳಿತ ಭವನದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್‌ರಾಂ ಅವರ 33ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ತಮ್ಮ ಬಾಲ್ಯದ ದಿನಗಳಲ್ಲಿ ಸ್ವತವೇ ತಾವೇ ಸಮಾಜದ ಶೋಷಣೆಗೊಳಗಾಗಿದ್ದು, ಅದು ಮತ್ತೇ ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಜಾತಿ, ಅಸಮಾನತೆ ವಿರುದ್ಧ ಹೋರಾಡಿದರು, ಶಿಕ್ಷ ಣ ತಜ್ಞರಾಗಿ, ಭಾರತದ ಉಪಪ್ರಧಾನಿಯಾಗಿಯೂ ದೇಶದ ಅಭಿವೃದ್ಧಿಗೆ ಶ್ರಮಿಸಿದರು, ದೇಶದ ಭವಿಷ್ಯದ ಹಿತದೃಷ್ಟಿಯಿಂದ ಆಹಾರೋತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿ ಮಾಡಲು ಹಸಿರು ಕ್ರಾಂತಿಯನ್ನು ಅನುಷ್ಠಾನ ಮಾಡಿದರು, ಇಂದು ದೇಶದ ಪ್ರತಿಯೊಬ್ಬ ಪ್ರಜೆಗಳು ಅವರನ್ನು ಸ್ಮರಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಬಾಬೂಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.ಜಿಪಂ ಸಾಮಾಜಿಕ ನ್ಯಾಯಸ್ಥಾಯಿಸಮಿತಿ ಅಧ್ಯಕ್ಷೆ ಉಮಾವತಿ,

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್‌.ಲತಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ ಕುಮಾರ್‌, ಜಿಪಂ ಮುಖ್ಯಯೋಜನಾಧಿಕಾರಿ ಪದ್ಮಶೇಖರ್‌ಪಾಂಡೆ, ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಪ್ರಕಾಶ್‌, ತಾಲೂಕು ಅಧಿಕಾರಿ ಕೇಶವಮೂರ್ತಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ