ಆ್ಯಪ್ನಗರ

ಮಹೇಶ್‌ ವಿರುದ್ಧ ಮತ್ತೆ ಹರಿಹಾಯ್ದ ಸಚಿವ

ಶಿಕ್ಷಣ ಸಚಿವ ಎನ್‌. ಮಹೇಶ್‌ ವಿರುದ್ಧ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಸಿ. ಪುಟ್ಟರಂಗಶೆಟ್ಟಿ ಮತ್ತೆ ಕಿಡಿಕಾರಿದ್ದು, ಕಾಂಗ್ರೆಸ್‌ ಕೈ ಕೊಟ್ಟರೆ ಅವರು ಸಚಿವರಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

Vijaya Karnataka 28 Sep 2018, 5:00 am
ಚಾಮರಾಜನಗರ: ಶಿಕ್ಷಣ ಸಚಿವ ಎನ್‌. ಮಹೇಶ್‌ ವಿರುದ್ಧ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಸಿ. ಪುಟ್ಟರಂಗಶೆಟ್ಟಿ ಮತ್ತೆ ಕಿಡಿಕಾರಿದ್ದು, ಕಾಂಗ್ರೆಸ್‌ ಕೈ ಕೊಟ್ಟರೆ ಅವರು ಸಚಿವರಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
Vijaya Karnataka Web minister is against to n mahesh
ಮಹೇಶ್‌ ವಿರುದ್ಧ ಮತ್ತೆ ಹರಿಹಾಯ್ದ ಸಚಿವ


ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಕೆರೆ ಯೋಜನೆ ಕಾಮಗಾರಿ ಪರಿಶೀಲನೆ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರಕಾರದಲ್ಲಿಕೊಂಡೇ ಕಾಂಗ್ರೆಸ್‌ ಅನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂಬ ಹೇಳಿಕೆಯನ್ನು ಸಹಿಸಲು ಸಾಧ್ಯವೇ ? ಅವರಿಗೆ ಸಚಿವ ಸ್ಥಾನವನ್ನು ನಾನು ಕೊಡದೇ ಇರಬಹುದು, ಆದರೆ ಕಾಂಗ್ರೆಸ್‌ ಪಕ್ಷ ನೀಡಿದೆ ಎಂಬುದನ್ನು ಮರೆಯಬಾರದು ಎಂದು ಹೇಳಿದ್ದಾರೆ.

ಅವರು (ಮಹೇಶ್‌) ಬೆಂಬಲ ವಾಪಸ್‌ ಪಡೆದರೆ ಸರಕಾರವೇನೋ ಬೀಳಲ್ಲ. ಅದೇ ಕಾಂಗ್ರೆಸ್‌ ಪಕ್ಷ ಬೆಂಬಲ ವಾಪಸ್‌ ಪಡೆದರೆ ಇವರು ಸಚಿವರಾಗಿ ಉಳಿಯಲ್ಲ ಎಂದಿದ್ದಾರೆ.

ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿರುವ ಅವರು, ಅದರ ಸಿದ್ಧಾಂತದಂತೆ ನಡೆದುಕೊಳ್ಳಬೇಕು. ಇಲ್ಲವಾದರೆ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ತಿಳಿಸಿದ್ದಾರೆ.

ಕೊಳ್ಳೇಗಾಲದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಎನ್‌. ಮಹೇಶ್‌ ಅವರು, ಇಲ್ಲಿ ಇದೀಗ ಕಾಂಗ್ರೆಸ್‌ (ಪಾರ್ಥೇನಿಯಂ) ಗಿಡವನ್ನು ಕಿತ್ತು ಹಾಕಿದ್ದೇವೆ. ಇದು ಅಪಾಯಕಾರಿ ಗಿಡ. ಅದನ್ನು ಕಿತ್ತು ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ ಎಂದಿದ್ದರು. ಅಲ್ಲದೇ ನಮ್ಮ ಭಾಗದಲ್ಲಿ ಪಾರ್ಥೇನಿಯಂ ಗಿಡಕ್ಕೆ ಕಾಂಗ್ರೆಸ್‌ ಗಿಡ ಎನ್ನುತ್ತಾರೆ ಎಂಬ ಸ್ಪಷ್ಟನೆಯನ್ನು ನೀಡಿದ್ದರು.

ಆದರೆ, ಕಾಂಗ್ರೆಸ್‌ ಗಿಡ ಕಿತ್ತು ಹಾಕುತ್ತೇವೆ ಎಂಬ ಮಾತು ಇದೀಗ ಇಬ್ಬರು ಸಚಿವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ