ಆ್ಯಪ್ನಗರ

ಬೆತ್ತಲೆ ಮೆರವಣಿಗೆ ಪ್ರಕರಣ: ಆರೋಪಿಗಳ ವಿಚಾರಣೆ ಇಂದು

ಗುಂಡ್ಲುಪೇಟೆಯಲ್ಲಿ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜು.3ಕ್ಕೆ ಮುಂದೂಡಿದೆ.

Vijaya Karnataka 3 Jul 2019, 5:00 am
ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರ ಜಾಮೀನು ಅರ್ಜಿ ವಿಚಾರಣೆಯನ್ನು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜು.3ಕ್ಕೆ ಮುಂದೂಡಿದೆ.
Vijaya Karnataka Web naked parade case conviction hearing today
ಬೆತ್ತಲೆ ಮೆರವಣಿಗೆ ಪ್ರಕರಣ: ಆರೋಪಿಗಳ ವಿಚಾರಣೆ ಇಂದು


ಪ್ರಕರಣದ ಆರು ಮಂದಿ ಆರೋಪಿಗಳ ಪರ ಜಾಮೀನು ಅರ್ಜಿ ವಿಚಾರಣೆ ಮಂಗಳವಾರ ನ್ಯಾಯಾಲಯದ ಮುಂದಿತ್ತು. ಆದರೆ, ಆರೋಪಿಗಳ ಪರ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವ ವಕೀಲ ಸಿದ್ದರಾಜು ಅವರ ಬದಲಿಗೆ ಕಿರಿಯ ವಕೀಲೆ ಹಾಜರಾಗಿದ್ದರು.

ಈ ಪ್ರಕರಣ ಅಮಾನವೀಯವಾಗಿರುವುದರಿಂದ ಆರೋಪಿಗಳ ಪರ ಜಿಲ್ಲೆಯ ವಕೀಲರು ವಕಾಲತ್ತು ವಹಿಸಬಾರದೆಂದು ಜಿಲ್ಲಾ ವಕೀಲರ ಸಂಘದ ಸಭೆಯಲ್ಲಿ ಚರ್ಚೆ ನಡೆದಿದೆ. ಹೀಗಾಗಿ ನಮ್ಮ ಹಿರಿಯ ವಕೀಲರು ತೀರ್ಮಾನ ಕೈಗೊಳ್ಳಬೇಕಾಗಿದ್ದು, ವಿಚಾರಣೆಯನ್ನು ಮುಂದೂಡಬೇಕೆಂದು ಕಿರಿಯ ವಕೀಲರು ನ್ಯಾಯಾಧೀಶರಲ್ಲಿ ವಿನಂತಿಸಿಕೊಂಡರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯನ್ನು ಜು.3ಕ್ಕೆ ಮುಂದೂಡಿದರು.

ಹಿಂದೆ ಸರಿಯುವರೇ?: ಬೆತ್ತಲೆ ಪ್ರಕರಣದ ಆರೋಪಿಗಳಾದ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್‌, ಪುಟ್ಟಸ್ವಾಮಿ ಹಾಗೂ ಚನ್ನಕೇಶವ ಅವರ ಪರ ವಕಾಲತ್ತು ವಹಿಸದಂತೆ ಜಿಲ್ಲಾ ಪ್ರಗತಿಪರ, ದಲಿತ ಒಕ್ಕೂಟ ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಂಘದ ಸಭೆಯಲ್ಲಿ ಈ ಬಗ್ಗೆ ಚರ್ಚೆಸಿ, ಆರೋಪಿಗಳ ಪರ ವಕಾಲತ್ತು ವಹಿಸಿದ್ದ ಅರಳೀಕಟ್ಟೆ ಸಿದ್ದರಾಜು ಅವರಿಗೆ ಹಿಂದೆ ಸರಿಯುವಂತೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಜು ವಕಾಲತ್ತು ಹಿಂಪಡೆಯುವವರೇ ಎಂಬುದು ಈಗಿನ ಪ್ರಶ್ನೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಕೀಲ ಸಿದ್ದರಾಜು ಅವರು ಬುಧವಾರ ಬೆಳಗ್ಗೆ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ