ಆ್ಯಪ್ನಗರ

ಸಕಾಲ ಸಮರ್ಪಕ ಸೇವೆಗೆ ಸೂಚನೆ

ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಿ ಜನರಿಗೆ ಸಮರ್ಪಕವಾಗಿ ಸೇವೆ ಲಭ್ಯವಾಗು ವಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ, ಸಕಾಲ ಸಚಿವ ಎಸ್‌.ಸುರೇಶ್‌ಕುಮಾರ್‌ ಸೂಚನೆ ನೀಡಿದರು.

Vijaya Karnataka 23 Oct 2019, 5:00 am
ಚಾಮರಾಜನಗರ: ಸಕಾಲ ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಿ ಜನರಿಗೆ ಸಮರ್ಪಕವಾಗಿ ಸೇವೆ ಲಭ್ಯವಾಗು ವಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ, ಸಕಾಲ ಸಚಿವ ಎಸ್‌.ಸುರೇಶ್‌ಕುಮಾರ್‌ ಸೂಚನೆ ನೀಡಿದರು.
Vijaya Karnataka Web CHN22P1_18


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿನಡೆದ ನಾನಾ ಇಲಾಖೆಗಳು ಅನುಷ್ಠಾನಗೊಳಿಸಿರುವ ಸಕಾಲ ಸೇವೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಕಾಲ ಸೇವೆಯಡಿ ಅರ್ಜಿಗಳನ್ನು ಸ್ವೀಕರಿಸುವ ಹಂತದಲ್ಲಿಯೇ ಅವಶ್ಯಕ ದಾಖಲಾತಿಗಳನ್ನು ಪಡೆದು ಅರ್ಜಿಯನ್ನು ಇತ್ಯರ್ಥ ಪಡಿಸಬೇಕು.

ದಾಖಲೆಗಳು ಇಲ್ಲವೆಂದು ತಿರಸ್ಕೃತ ಮಾಡಬಾರದು ಎಂದು ತಿಳಿಸಿದರು. ಸಕಾಲ ಯೋಜನೆಯಡಿ ಯಲ್ಲಿಯೇ ಅರ್ಜಿಗಳನ್ನು ಸ್ವೀಕರಿಸ ಬೇಕು. ಇತರೆ ವಿಧಾನಗಳ ಮೂಲಕ ಅರ್ಜಿ ಸ್ವೀಕರಿಸದೆ ಜನಪರವಾಗಿ ಕಾಲ ಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡಬೇಕು. ಜನರ ನಂಬಿಕೆ, ವಿಶ್ವಾಸಗಳಿಸಬೇಕು ಎಂದು ಸಚಿವರು ತಿಳಿಸಿದರು.  ಸಕಾಲ ಸಮರ್ಪಕ ಸೇವೆಗೆ ಸೂಚನೆ  ನಮ್ಮ ಮೊದಲ ಪುಟದಿಂದ ಸಕಾಲ ಸೇವೆಗಳ ಮಾಹಿತಿ ಫಲಕವನ್ನು ಎಲ್ಲಾಕಚೇರಿಗಳಲ್ಲಿಅಳವಡಿಸಬೇಕು.

ಜನರಿಗೆ ಯಾವ ಅವಧಿಯೊಳಗೆ ಸೇವೆ ಲಭ್ಯವಾಗಲಿದೆ ಎಂಬುದು ಸಮಗ್ರವಾಗಿ ತಿಳಿಯುವಂತಾಗಬೇಕು. ಗ್ರಾಮ ಪಂಚಾಯಿತಿ ಅಟಲ್‌ಜೀ ಜನಸ್ನೇಹಿ ಕೇಂದ್ರ ಸೇರಿದಂತೆ ಎಲ್ಲೆಡೆ ಫಲಕವನ್ನು ಅಳವಡಿಸುವಂತೆ ಸೂಚಿಸಿದರು.

ಜಿಲ್ಲೆಗೆ ನಾಲ್ಕನೇ ಸ್ಥಾನ: ಚಾಮರಾಜನಗರ ಜಿಲ್ಲೆಯು ಸಕಾಲ ಸೇವೆ ಅನುಷ್ಠಾನದಲ್ಲಿಸೆಪ್ಟೆಂಬರ್‌ ತಿಂಗಳಲ್ಲಿನಾಲ್ಕನೇ ಸ್ಥಾನದಲ್ಲಿದ್ದು, ಅಕ್ಟೋಬರ್‌ನಲ್ಲಿ2ನೇ ಸ್ಥಾನದಲ್ಲಿದೆ. ಜಿಲ್ಲೆಯು ಅಗ್ರಸ್ಥಾನಕ್ಕೆ ಬರಲು ಶ್ರಮಿಸುವಂತೆ ಸಚಿವರು ತಿಳಿಸಿದರು. ಕರ್ನಾಟಕದಲ್ಲಿಸೇವಾಸಿಂಧು ಕೇಂದ್ರಗಳಿದ್ದು, ಸಾರ್ವಜನಿಕರು ಆನ್‌ಲೈನ್‌ ಮೂಲಕವು ಅರ್ಜಿ ಸಲ್ಲಿಸಿ ಸೇವೆ ಪಡೆಯಬಹುದು ಎಂದರು.

ಅತಿ ಹೆಚ್ಚಿನ ಸೇವೆ : ಸಕಾಲ ಆಪರೇಷನ್‌ ನಿರ್ದೇಶಕರಾದ ವರಪ್ರಸಾದ್‌ ರೆಡ್ಡಿ ಅವರು ಮಾತನಾಡಿ, 1036 ಸೇವೆಗಳನ್ನು ಸಕಾಲದಡಿ ಸೇರಿಸಲಾಗಿದ್ದು ಬಹುಶಃ ರಾಷ್ಟ್ರದಲ್ಲಿಕರ್ನಾಟಕ ರಾಜ್ಯವು ಅತೀ ಹೆಚ್ಚಿನ ಸೇವೆಗಳನ್ನು ಸಕಾಲದಲ್ಲಿನೀಡಲಾಗುತ್ತಿದೆ ಎಂದರು. ಇದಕ್ಕೂ ಮೊದಲು ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲಿಸಿದರು.

ಸಮರ್ಪಕ ನಿರ್ವಹಣೆಗೆ ಸೂಚನೆ ನೀಡಿದರು. ಸಂಸದ ವಿ.ಶ್ರೀನಿವಾಸಪ್ರಸಾದ್‌, ಶಾಸಕರಾದ ಎನ್‌.ಮಹೇಶ್‌, ಸಿ.ಎಸ್‌.ನಿರಂಜನ್‌ಕುಮಾರ್‌ ಅವರು ಸಹ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಚ್‌.ನಾರಾಯಣ ರಾವ್‌, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ಕುಮಾರ್‌, ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿ ಶ್ರೀಧರ್‌ ಮತ್ತಿತರರು ಸಭೆಯಲ್ಲಿಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ