ಆ್ಯಪ್ನಗರ

ವಿದ್ಯುತ್‌ ಸ್ಪರ್ಶ: ರೈತ ಸಾವು

ತಾಲೂಕಿನ ಹಂಗಳ ಹೊರವಲಯದಲ್ಲಿ ನೀರಾವರಿ ಜಮೀನಿನಲ್ಲಿ ಶುಕ್ರವಾರ ಬೆಳಗ್ಗೆ ನೀರೆತ್ತುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿದ ಪರಿಣಾಮ ರೈತರೊಬ್ಬರು ಮೃತಪಟ್ಟಿದ್ದಾರೆ.

Vijaya Karnataka 28 Jul 2018, 5:00 am
ಗುಂಡ್ಲುಪೇಟೆ: ತಾಲೂಕಿನ ಹಂಗಳ ಹೊರವಲಯದಲ್ಲಿ ನೀರಾವರಿ ಜಮೀನಿನಲ್ಲಿ ಶುಕ್ರವಾರ ಬೆಳಗ್ಗೆ ನೀರೆತ್ತುವ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿದ ಪರಿಣಾಮ ರೈತರೊಬ್ಬರು ಮೃತಪಟ್ಟಿದ್ದಾರೆ.
Vijaya Karnataka Web power touch farmer death
ವಿದ್ಯುತ್‌ ಸ್ಪರ್ಶ: ರೈತ ಸಾವು


ಹಂಗಳ ಗ್ರಾಮದ ಹಾಲಿ ತೋಟದ ಮನೆಯಲ್ಲಿ ವಾಸವಿದ್ದ ಪ್ರಕಾಶ್‌(43) ಮೃತರು. ಕುಟುಂಬ ಸದಸ್ಯರೊಂದಿಗೆ ನೀರಾವರಿ ಜಮೀನಿನಲ್ಲಿ ಇವರು ವಾಸವಾಗಿದ್ದ ಇವರು, ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರಾಯಿಸುವ ಸಲುವಾಗಿ ಮನೆ ಪಕ್ಕದಲ್ಲೇ ಇದ್ದ ಯಂತ್ರಗಾರಕ್ಕೆ ಹೋಗಿ ಸ್ಟಾರ್ಟರ್‌ ಆನ್‌ ಮಾಡುತ್ತಿದ್ದ ಸಂದರ್ಭ ವಿದ್ಯುತ್‌ ಸ್ಪರ್ಶಿಸಿ ಕುಸಿದು ಬಿದ್ದಿದ್ದಾರೆ. ನೀರೆತ್ತುವುದಾಗಿ ತಿಳಿಸಿ ಹೋದ ಪತಿ ತಡವಾದರೂ ವಾಪಸ್‌ ಬಾರದ ಹಿನ್ನೆಲೆಯಲ್ಲಿ ಪತ್ನಿ ಬಂದು ನೋಡಿದಾಗ ವಿದ್ಯುತ್‌ ಸ್ಪರ್ಶಿಸಿರುವುದು ಗೊತ್ತಾಗಿದೆ. ಜಮೀನಿನಲ್ಲಿ ಇದ್ದವರು ವಿದ್ಯುತ್‌ ಸಂಪರ್ಕ ಕಡಿತ ಮಾಡಿದ ನಂತರ ಚಿಕಿತ್ಸೆ ಸಲುವಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಕಾಶ್‌ ಮೃತಪಟ್ಟರು ಎಂದು ಗ್ರಾಮಸ್ಥರು ಪತ್ರಿಕೆಗೆ ತಿಳಿಸಿದ್ದಾರೆ.

ಪಟ್ಟಣದ ಕಬ್ಬಹಳ್ಳಿಸಾಹುಕಾರ್‌ ಕೆ.ಸಿ.ಸುಬ್ಬಣ್ಣರ ಸಾರ್ವಜನಿಕ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದು, ಕೃಷಿ ಕಾರ್ಯಕ್ಕೆ ಅನುಕೂಲವಾಗಲೆಂದು ಕುಟುಂಬವನ್ನು ಹಂಗಳದ ಮನೆಯಿಂದ ತೋಟಕ್ಕೆ ವರ್ಗಾಯಿಸಿದ್ದರು. ಕುಟುಂಬದ ಆಧಾರಸ್ತಂಭವನ್ನೇ ಕಳೆದುಕೊಂಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ