ಆ್ಯಪ್ನಗರ

ಸಂತೇಮರಹಳ್ಳಿಯಲ್ಲಿ ಪ್ರತಿಭಾ ಕಾರಂಜಿ

ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕ್ಷ ಕರ ಪಾತ್ರ ಬಹಳ ಮುಖ್ಯವಾದುದು ಎಂದು ತಾ.ಪಂ.ಸದಸ್ಯ ಕೆ.ರವೀಶ್‌ ತಿಳಿಸಿದರು.

Vijaya Karnataka 28 Aug 2018, 5:00 am
ಸಂತೇಮರಹಳ್ಳಿ : ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕ್ಷ ಕರ ಪಾತ್ರ ಬಹಳ ಮುಖ್ಯವಾದುದು ಎಂದು ತಾ.ಪಂ.ಸದಸ್ಯ ಕೆ.ರವೀಶ್‌ ತಿಳಿಸಿದರು.
Vijaya Karnataka Web pratibhakaranji in santemarahalli
ಸಂತೇಮರಹಳ್ಳಿಯಲ್ಲಿ ಪ್ರತಿಭಾ ಕಾರಂಜಿ


ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಮಾತನಾಡಿದರು.

'' ಪ್ರತಿಯೊಂದು ಮಗುವೂ ತನ್ನದೇ ಆದ ಪ್ರತಿಭೆ ಹೊಂದರಿರುತ್ತದೆ. ಅದನ್ನು ಶಿಕ್ಷ ಕರು ಗುರುತಿಸಿ ಅವರಿಗೆ ಹೆಚ್ಚು ತರಬೇತಿ ನೀಡಬೇಕು. ಆ ಮೂಲಕ ಅವರನ್ನು ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ವರೆಗೆ ಹೋಗಲು ಅವಕಾಶ ಕಲ್ಪಿಸಿಕೊಡಬೇಕು ''ಎಂದರು.

ಗ್ರಾ.ಪಂ.ಸದಸ್ಯ ಎಂ.ಪಿ,ಶಂಕರ್‌ ಮಾತನಾಡಿ, ಸರಕಾರ ಸರಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟ, ಉಚಿತ ಪಠ್ಯಪುಸ್ತಕ, ವಿದ್ಯಾರ್ಥಿ ವೇತನ ಸೇರಿದಂತೆ ನಾನಾ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯನ್ನು ಬಳಕೆ ಮಾಡಿಕೊಳ್ಳಲು ಪ್ರತಿಯೊಬ್ಬ ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲು ಮಾಡುವ ಮೂಲಕ ದಾಖಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಯಾವ್ಯಾವಾ ಕಾರ್ಯಕ್ರಮ: ಏಕಾಪಾತ್ರ ಅಭಿನಯ, ನೃತ್ಯ, ನಾಟಕ, ಕನ್ನಡ ಕಂಠ ಪಾಠ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ನಾನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಗ್ರಾ.ಪಂ.ಅಧ್ಯಕ್ಷೆ ಶೋಭಾ, ಪ್ರೌಢಶಾಲೆ ವಿಭಾಗ ಮುಖ್ಯ ಶಿಕ್ಷ ಣ ಶಿವಣ್ಣ, ಶಿಕ್ಷ ಕ ಜಯಶಂಕರ್‌, ಸಂಪನ್ಮೂಲ ವ್ಯಕ್ತಿಗಳಾದ ರವಿಕುಮಾರ್‌, ಮಹೇಶ್‌, ವಾಸು, ಮುಖ್ಯ ಶಿಕ್ಷ ಕ ರಂಗಸ್ವಾಮಿ ಸೇರಿದಂತೆ ನಾನಾ ಶಾಲೆ ಶಿಕ್ಷ ಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ