ಆ್ಯಪ್ನಗರ

ದಲಿತ,ಮುಸ್ಲಿಮರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದಲಿತರು ಮತ್ತು ಮುಸ್ಲಿಮರ ಮೇಲಿನ ದೌರ್ಜನ್ಯ ಖಂಡಿಸಿ ಯುವ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ನ ಅಲ್ಪಸಂಖ್ಯಾತ ಸಮಿತಿ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

Vijaya Karnataka 10 Jul 2019, 5:00 am
ಚಾಮರಾಜನಗರ: ದಲಿತರು ಮತ್ತು ಮುಸ್ಲಿಮರ ಮೇಲಿನ ದೌರ್ಜನ್ಯ ಖಂಡಿಸಿ ಯುವ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ನ ಅಲ್ಪಸಂಖ್ಯಾತ ಸಮಿತಿ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
Vijaya Karnataka Web CHN-CHN09UM8


ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ರಚಿಸಿ, ಟೈರ್‌ಗೆ ಬೆಂಕಿ ಹಚ್ಚಿ ಕೆಲಕಾಲ ರಸ್ತೆತಡೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಚೇತನ್‌ ದೊರೈರಾಜ್‌, ದೇಶ ಹಾಗೂ ರಾಜ್ಯದಲ್ಲಿ ದಲಿತರು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿಯನ್ನು ರದ್ದು ಮಾಡಬೇಕು. ಜಾರ್ಖಂಡ್‌ ರಾಜ್ಯದ ಸರೈಕೆಲಾ ಎಂಬ ಜಿಲ್ಲೆಯಲ್ಲಿ 24 ವರ್ಷದ ಮುಸ್ಲಿಂ ಸಮುದಾಯಕ್ಕೆ ಸೇರಿದ ತಬ್ರೇಜ್‌ ಅನ್ಸಾರಿ ಎಂಬ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ಅಸ್ಗರ್‌, ನಗರಸಭೆ ಸದಸ್ಯ ಆರ್‌.ಪಿ.ನಂಜುಂಡಸ್ವಾಮಿ, ಯುವ ಕಾಂಗ್ರೆಸ್‌ ಕಾರ್ಯದರ್ಶಿ ಅಜಯ್‌ ಶಂಭು, ಅಲ್ಪಸಂಖ್ಯಾತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಜರ್‌, ಕೊಳ್ಳೇಗಾಲ ಅಧ್ಯಕ್ಷ ಅಬ್ದುಲ್‌, ಅಲ್ಪಸಂಖ್ಯಾತ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಸೈಯದ್‌ ತೌಸಿಫ್‌, ರಾಯಲ್‌ಬೇಗ್‌, ಸೈಯದ್‌ಆರೀಫ್‌, ಇಮ್ರಾನ್‌, ಚಿನ್ನಸ್ವಾಮಿ, ಮಹದೇವಸ್ವಾಮಿ ಇತರರು ಭಾಗವಹಿಸಿದ್ದರು.

ದಲಿತರು,ಮುಸ್ಲಿಮರ, ಮೇಲಿನ ದೌರ್ಜನ್ಯ ಖಂಡಿಸಿ ಯುವ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ನ ಅಲ್ಪಸಂಖ್ಯಾತ ಸಮಿತಿ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ