ಆ್ಯಪ್ನಗರ

ಜಿಲ್ಲಾಸ್ಪತ್ರೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ಎಂದು ಆರೋಪಿಸಿ ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

Vijaya Karnataka 16 Jul 2019, 5:00 am
ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ಎಂದು ಆರೋಪಿಸಿ ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಸೋಮವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web news/chamarajnagara/protest
ಜಿಲ್ಲಾಸ್ಪತ್ರೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ


ಜಿಲ್ಲಾಸ್ಪತ್ರೆ ಆವರಣದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಜಿಲ್ಲಾಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕೇಂದ್ರದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸೌಲಭ್ಯವಿಲ್ಲ. ಔಷಧಿಗಳನ್ನು ತರಲು ಸಮೀಪದ ಔಷಧಿ ಅಂಗಡಿಗಳಿಗೆ ಚೀಟಿ ಬರೆದು ಕೊಡುವ ವ್ಯವಸ್ಥೆಯಿದೆ, ದುಬಾರಿ ಹಣ ತೆತ್ತು ಔಷಧಿ ಖರೀದಿಸಬೇಕಿದೆ, ಶೌಚಾಲಯಗಳು ತುಂಬ ಹದಗೆಟ್ಟಿದ್ದು, ರೋಗಿಗಳು ಉಪಯೋಗಿಸಲು ಹಿಂದೆ ಮುಂದೆ ನೋಡುವಂತಾಗಿದೆ, ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ, ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕರು ಕ್ರಮ ವಹಿಸದೇ ನಿರ್ಲಕ್ಷ ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

15 ದಿನದೊಳಗೆ ಜಿಲ್ಲಾಸ್ಪತ್ರೆ ಸಮಸ್ಯೆಗಳ ನಿವಾರಣೆಗೆ ಆಸ್ಪತ್ರೆ ಆಡಳಿತ ಮಂಡಳಿ ಮುಂದಾಗಬೇಕು, ಇಲ್ಲದಿದ್ದಲ್ಲಿ ಮತ್ತೆ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ರೈತ Üಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಹೊನ್ನೂರು ಪ್ರಕಾಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಗುರುಪ್ರಸಾದ್‌, ತಾಲೂಕು ಅಧ್ಯಕ್ಷ ಮಹದೇವಸ್ವಾಮಿ, ಮಾಡ್ರಹಳ್ಳಿ ಮಹದೇವಪ್ಪ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಕಂದೇಗಾಲ ಮಹೇಶ್‌, ಚಂಗಡಿಕರಿಯಪ್ಪ, ಶಾಂತಕುಮಾರ್‌, ಕೌದಳ್ಳಿ ಮುತ್ತಯ್ಯ, ಅಂಬಳೆ ಶಿವಕುಮಾರ್‌, ಚನ್ನಪ್ಪನಪುರ ಪ್ರಸಾದ್‌, ಬೂದಿತಿಟ್ಟುಮಹದೇವ, ಅಣ್ಣೂರುಕೇರಿ ಸಿದ್ದರಾಜು ಸೇರಿದಂತೆ ರೈತರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ