ಆ್ಯಪ್ನಗರ

ಡೊನೇಷನ್‌ ದಂಧೆ ವಿರುದ್ಧ ಆಕ್ರೋಶ

ಜಿಲ್ಲೆಯ ಖಾಸಗಿ ಶಿಕ್ಷ ಣ ಸಂಸ್ಥೆಗಳಲ್ಲಿ ಹೆಚ್ಚಿನ ಡೊನೇಷನ್‌ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು, ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು.

Vijaya Karnataka 1 May 2019, 5:00 am
ಚಾಮರಾಜನಗರ: ಜಿಲ್ಲೆಯ ಖಾಸಗಿ ಶಿಕ್ಷ ಣ ಸಂಸ್ಥೆಗಳಲ್ಲಿ ಹೆಚ್ಚಿನ ಡೊನೇಷನ್‌ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು, ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು.
Vijaya Karnataka Web CHN-CHN30UM3


ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಖಾಸಗಿ ಶಾಲೆಗಳಲ್ಲಿನ ಡೊನೇಷನ್‌ ಹಾವಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ ಅವರಿಗೆ ಮನವಿ ಸಲ್ಲಿಸಿದರು.

ಇದಕ್ಕೂ ಮೊದಲ ಮಾತನಾಡಿದ , ಪ್ರತಿಭಟನೆ ನೇತೃತ್ವ ವಹಿಸಿದ್ದ ಸೇನಾಪಡೆ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಜಿಲ್ಲೆಯ ಖಾಸಗಿ ಶಿಕ್ಷ ಣ ಸಂಸ್ಥೆಗಳಲ್ಲಿ ಶಿಕ್ಷ ಣದ ಹೆಸರಿನಲ್ಲಿ ಪೋಷಕರಿಂದ ಹೆಚ್ಚಿನ ಡೊನೇಷನ್‌ ಪಡೆಯಲಾಗುತ್ತಿದೆ. ಶಿಕ್ಷ ಣದ ಶುಲ್ಕವನ್ನು ಸಹ ಹೆಚ್ಚಾಗಿ ಪಡೆಯುತ್ತಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿನ ಬಡ ವಿದ್ಯಾರ್ಥಿಗಳು ಶಿಕ್ಷ ಣದಿಂದ ವಂಚಿತರಾಗುತ್ತಿದ್ದಾರೆ. ಖಾಸಗಿ ಶಿಕ್ಷ ಣ ಸಂಸ್ಥೆಗಳು ಡೊನೇಷನ್‌ ಹೆಸರಿನಲ್ಲಿ ಹಗಲು ದರೋಡೆ ಮಾಡುತ್ತಿವೆ ಎಂದು ಆರೋಪಿಸಿದರು.

ಶಿಕ್ಷ ಣ ಸಂಸ್ಥೆಗಳ ಜತೆಯಲ್ಲಿ ಜಿಲ್ಲಾಡಳಿತ, ಶಿಕ್ಷ ಣ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದು, ಡೊನೇಷನ್‌ ದಂಧೆಗೆ ಸಹಕಾರ ನೀಡುತ್ತಿದ್ದಾರೆ.

ಪೋಷಕರು ಶಾಲೆಗಳಲ್ಲಿ ಹೆಚ್ಚಿನ ಡೊನೇಷನ್‌, ಶಾಲಾ ಶುಲ್ಕವನ್ನು ಕೇಳಲು ಹೋದರೆ ಸರಿಯಾದ ಉತ್ತರ ಕೊಡದೆ ಕುಂಟು ನೆಪ ಹೇಳುತ್ತಿದ್ದಾರೆ. ಅಲ್ಲದೇ ಕೆಲವು ಶಿಕ್ಷ ಣ ಸಂಸ್ಥೆಗಳು ನೇರವಾಗಿ ಡೊನೇಷನ್‌ ಪಡೆಯದೆ ತಮ್ಮ ಬ್ಯಾಂಕ್‌ಗಳ ಖಾತೆಗೆ ಪೋಷಕರಿಂದ ಹಣವನ್ನು ಪಡೆಯುತ್ತಿದ್ದಾರೆ. ಖಾಸಗಿ ಶಿಕ್ಷ ಣ ಸಂಸ್ಥೆಗಳ ತನಿಖೆ ಮಾಡಿಸಿ ಅವರ ಆಸ್ತಿಯನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಪ್ರತಿವರ್ಷ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಭೆ ನಡೆಸಿ, ಅವರಿಗೆ ಡೊನೇಷನ್‌, ಶಾಲಾ ಶುಲ್ಕದ ಬಗ್ಗೆ ಕಟ್ಟುನಿಟ್ಟಾಗಿ ಆದೇಶ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿತ್ತು. ಆದರೆ, ಕಳೆದ 2 ವರ್ಷಗಳಿಂದ ಖಾಸಗಿ ಸಂಸ್ಥೆಗಳ ಸಭೆಯನ್ನು ಕರೆದಿಲ್ಲ. ಕೂಡಲೇ ಜಿಲ್ಲಾಧಿಕಾರಿಯವರು ಖಾಸಗಿ ಶಿಕ್ಷ ಣ ಸಂಸ್ಥೆಗಳ ಆಡಳಿತ ಮಂಡಳಿಯ ಸಭೆಯನ್ನು ಕರೆದು ಹೆಚ್ಚಿನ ಡೊನೇಷನ್‌ಗೆ ಕಡಿವಾಣ ಹಾಕಬೇಕು. ಸರಕಾರ ಶಿಕ್ಷ ಣವನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪರ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಶಾ.ಮುರಳಿ ಮಾತನಾಡಿ, ಜಿಲ್ಲಾಡಳಿತ, ಶಿಕ್ಷ ಣ ಇಲಾಖೆ ಅಧಿಕಾರಿಗಳು ಖಾಸಗಿ ಶಿಕ್ಷ ಣ ಸಂಸ್ಥೆಗಳ ಜತೆಯಲ್ಲಿ ಶಾಮೀಲಾಗಿದ್ದು, ಹೆಚ್ಚಿನ ಡೊನೇಷನ್‌ ಪಡೆಯಲು ಸಂಪೂರ್ಣ ಸಹಕಾರ ನೀಡುತ್ತಿವೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಚಾ.ಗು.ನಾಗರಾಜು, ಗು.ಪುರುಷೋತ್ತಮ್‌, ನಿಜಧ್ವನಿ ಗೋವಿಂದರಾಜು, ಚಾ.ಹ.ಶಿವರಾಜ್‌, ಟೈಲರ್‌ ನಟರಾಜು, ನಂಜುಂಡಸ್ವಾಮಿ, ಶಿವಶಂಕರ್‌ನಾಯಕ, ಶಿವಕುಮಾರ್‌, ತಾಂಡವಮೂರ್ತಿ, ಸ್ವಾಮಿ, ರಾಜು, ಸಿದ್ದರಾಜು, ಟೈಲರ್‌ ಶಿವಣ್ಣ, ರಾಜಶೇಖರ್‌ ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ