ಆ್ಯಪ್ನಗರ

ಮಳೆಗೆ ಕೊಚ್ಚಿ ಹೋದ ಸೇತುವೆ: ಜನರ ಪರದಾಟ

ಸಂತೇಮರಹಳ್ಳಿ ಸಮೀಪದ ಜನ್ನೂರು ಗ್ರಾಮದಲ್ಲಿ ಕಳೆದ 2 ವರ್ಷದ ಹಿಂದೆ ನಿರ್ಮಾಣ ಮಾಡಲಾಗಿದ್ದ ಸೇತುವೆ ಮಳೆಗೆ ಕೊಚ್ಚಿ ಹೋಗಿರುವ ಪರಿಣಾಮ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Vijaya Karnataka 14 Jun 2019, 5:00 am
ಪುರುಷೋತ್ತಮ ಸಂತೇಮರಹಳ್ಳಿ
Vijaya Karnataka Web CHN-CHN13SMR1


ಸಂತೇಮರಹಳ್ಳಿ ಸಮೀಪದ ಜನ್ನೂರು ಗ್ರಾಮದಲ್ಲಿ ಕಳೆದ 2 ವರ್ಷದ ಹಿಂದೆ ನಿರ್ಮಾಣ ಮಾಡಲಾಗಿದ್ದ ಸೇತುವೆ ಮಳೆಗೆ ಕೊಚ್ಚಿ ಹೋಗಿರುವ ಪರಿಣಾಮ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಸಮೀಪದ ಜಾಲದಮ್ಮ ಗುಡಿಯ ಬಳಿ ಇರುವ ಅಡ್ಡಹಳ್ಳದ ಮಾರ್ಗದಿಂದ ಗ್ರಾಮದ ಪರಿಶಿಷ್ಟ ಸಮುದಾಯವರು ತಮ್ಮ ಜಮೀನುಗಳಿಗೆ ಕೃಷಿ ಕೆಲಸ ಕೈಗೊಳ್ಳಲು ಅಡ್ಡಹಳ್ಳ ಇಳಿದು ಮೇಲಕ್ಕೆ ಹತ್ತಿ ಜಮೀನುಗಳಿಗೆ ತೆರಳುವ ಸ್ಥಿತಿ ನಿರ್ಮಾಣವಾಗಿತ್ತು.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗಾಗುತ್ತಿದ್ದ ಅನಾನುಕೂಲದ ತಪ್ಪಿಸುವ ನಿಟ್ಟಿನಲ್ಲಿ 2016-17ನೇ ಸಾಲಿನಲ್ಲಿ ಎಸ್‌.ಜಯಣ್ಣ ಶಾಸಕರಾಗಿದ್ದ ವೇಳೆಯಲ್ಲಿ ಸೇತುವೆ ನಿರ್ಮಿಸಿಕೊಡಬೇಕೆಂದು ಮನವಿ ನೀಡಲಾಗಿತ್ತು.

ಜಿಲ್ಲಾ ಪಂಚಾಯಿತಿ ಇಲಾಖೆ ವತಿಯಿಂದ 4 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಮಾಡುವ ಸಂಬಂಧ ಕಾಮಗಾರಿಗೆ ಚಾಲನೆ ನೀಡಲಾಯಿತು.

ಕಾಮಗಾರಿ ಆರಂಭವಾದ ಹಿನ್ನೆಲೆಯಲ್ಲಿ ಗ್ರಾಮದ ಜನರು ಕೊನೆಗೂ ಅಡ್ಡಹಳ್ಳಕ್ಕೆ ಸೇತುವೆ ನಿರ್ಮಾಣವಾಗುತ್ತಿದೆ ಎಂದು ಖುಷಿ ಪಟ್ಟರು. ಆದರೆ ಸಂಬಂಧಪಟ್ಟ ಗುತ್ತಿಗೆದಾರ ಸೇತುವೆಗೆ ಪೈಪ್‌ ಹಾಕಿದ ನಂತರ ಕಾಂಕ್ರಿಟ್‌ ಹಾಕಿ ಸೇತುವೆ ನಿರ್ಮಾಣ ಮಾಡಬೇಕಾಗಿತ್ತು. ಆದರೆ ಕಾಮಗಾರಿಯನ್ನು ನಿಯಮಾನುಸಾರವಾಗಿ ಮಾಡದೇ ಸೇತುವೆಗೆ ಪೈಪ್‌ ಅಳವಡಿಸಿ ಅದರ ಮೇಲೆ ಮಣ್ಣು ಹಾಕಿ ಮುಚ್ಚಲಾಗಿತ್ತು.

ಆದರೆ ಕಾಮಗಾರಿ ಪೂರ್ಣಗೊಂಡ 6 ತಿಂಗಳ ಹಿಂದೆ ಬಿದ್ದ ಮಳೆಗೆ ಸ್ವಲ್ಪ ಪ್ರಮಾಣದಲ್ಲಿ ಸೇತುವೆ ಮಣ್ಣು ಕರಗಿ ಹೋಗಿತು. ಆದರೆ ಈಗ ಕಳೆದ 1 ವಾರದ ಹಿಂದೆ ಬಿದ್ದ ಗಾಳಿ ಮಳೆಗೆ ಸಂಪೂರ್ಣವಾಗಿ ಸೇತುವೆ ಮಣ್ಣು ಕೊಚ್ಚಿ ಹೋಗಿದ್ದು, ಪೈಪ್‌ಗಳು ಮೇಲೆ ಕಾಣತೊಡಗಿವೆ.

ಗ್ರಾಮದ ಪರಿಶಿಷ್ಟ ಸಮುದಾಯ ಬೀದಿಯಲ್ಲಿ ಯಾರೇ ಮೃತಪಟ್ಟರೂ ತಮ್ಮ ಜಮೀನುಗಳಿಗೆ ಸೇತುವೆ ದಾಟಿ ಹೋಗಿ ಶವ ಸಂಸ್ಕಾರ ಮಾಡುತ್ತಿದ್ದರು. ಆದರೆ ಈಗ ಸೇತುವೆ ಮಳೆಯ ನೀರಿಗೆ ಕರಗಿ ಹೋಗಿರುವ ಪರಿಣಾಮ ಗ್ರಾಮದ ಸಮುದಾಯ ಯಾರೇ ಮೃತಪಟ್ಟರು ಜಮೀನುಗಳಿಗೆ ಶವ ತೆಗೆದುಕೊಂಡು ಹೋಗಲು ತೊಂದರೆಯಾಗುತ್ತಿದೆ ಹಾಗೂ ರೈತರು ತಮ್ಮ ಜಮೀನುಗಳಿಗೆ ತೆರಳಬೇಕಾದರೆ ಜಾಲದಮ್ಮ ಗುಡಿರಸ್ತೆಯೇ ಮೂಲವಾಗಿದೆ.

ಈ ಹಿನ್ನೆಲೆಯಲ್ಲಿ ಈಗ ಸೇತುವೆ ಮಳೆಗೆ ಕೊಚ್ಚಿ ಹೋಗಿರುವ ಪರಿಣಾಮ ರೈತರು ತಮ್ಮ ಜಮೀನುಗಳಿಗೆ ತೆರಳಲು ತೊಂದರೆಪಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಇತ್ತ ಗಮನಹರಿಸಿ ಸೇತುವೆ ಪುನರ್‌ ನಿರ್ಮಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದ ಜಾಲದಮ್ಮ ಗುಡಿ ಬಳಿ ನಿರ್ಮಾಣ ಮಾಡಲಾಗಿರುವ ಸೇತುವೆ ಒಂದೇ ಮಳೆಗೆ ಸಂಪೂರ್ಣ ಕೊಚ್ಚಿ ಹೋಗಿದ್ದು. ಈಗ ರೈತರು ಜಮೀನುಗಳಿಗೆ ತೆರಳಲು ತುಂಬ ತೊಂದರೆ ಪಡುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟವರು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಶಾಂತರಾಜು ಗ್ರಾಮದ ನಿವಾಸಿ



ಜನ್ನೂರು ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿದ್ದ ಸೇತುವೆ ಮಳೆಗೆ ಕೊಚ್ಚಿ ಹೋಗಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಕೂಡಲೇ ಸ್ಥಳಕ್ಕೇ ಭೇಟಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಚಿದಾನಂದಪ್ಪ, ಜಿಲ್ಲಾ ಪಂಚಾಯಿತಿ ಸಹಾಯಕ ಎಂಜಿನಿಯರ್‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ