ಆ್ಯಪ್ನಗರ

ವಿಶೇಷ ನ್ಯಾಯಾಲಯ ಸ್ಥಾಪನೆಗೆ ಶಿಫಾರಸು

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ನ್ಯಾಯಾಲಯ ಆರಂಭಿಸಲು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಲಿದೆ.

Vijaya Karnataka 16 Jun 2019, 5:00 am
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ನ್ಯಾಯಾಲಯ ಆರಂಭಿಸಲು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಲಿದೆ.
Vijaya Karnataka Web CHN-CHN15UM1


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಅನುಸೂಚಿತ ಜಾತಿ ಮತ್ತು ಪಂಗಡಗಳ ಯೋಜನೆ ಅನುದಾನ ಇತರೆ ಕಲ್ಯಾಣ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಬಳಿಕ Óಮಿತಿ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದರು.

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳು ಶೀಘ್ರ ಇತ್ಯರ್ಥಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ನ್ಯಾಯಾಲಯ ತೆರೆಬೇಕೆಂಬ ಶಿಫಾರಸು ಮಾಡಲಿದ್ದೇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಸರಕಾರ ಅನುದಾನ ನೀಡುತ್ತಿದೆ. ಈ ಅನುದಾನದ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿದೆಯೇ, ಇದರಿಂದ ಪರಿಶಿಷ್ಟರು ಸ್ವಾಭಿಮಾನದ ಬದುಕು, ಜೀವನ ನಡೆಸಲು ಸಾಧ್ಯವಾಗುತ್ತಿದೆಯೇ ಎಂಬ ಬಗ್ಗೆ ಸಮಿತಿ ಪರಿಶೀಲಿಸುತ್ತಿದೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಕಲ್ಯಾಣ ಕಾರ್ಯಕ್ರಮಗಳು ಎಷ್ಟರಮಟ್ಟಿಗೆ ಪ್ರಗತಿಯಾಗುತ್ತಿದೆ ಎಂಬ ಬಗ್ಗೆ ಪ್ರತ್ಯೇಕ ಸಭೆಯನ್ನು ಮೂರು ತಿಂಗಳಿಗೊಮ್ಮೆ ನಡೆಸಬೇಕು. ಕಾರ್ಯಕ್ರಮಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುತ್ತಿದೆಯೆ ಎಂಬ ಬಗ್ಗೆ ಪ್ರಗತಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಸಾಕ್ಷರತೆ ಪ್ರಮಾಣ ಕಡಿಮೆ: ಜಿಲ್ಲೆಯಲ್ಲಿ ಪರಿಶಿಷ್ಟರ ಸಾಕ್ಷ ರತೆ ಪ್ರಮಾಣ ಕಡಿಮೆ ಇದೆ. ಅದರಲ್ಲಿಯೂ ಮಹಿಳೆಯರ ಸಾಕ್ಷ ರತಾ ಪ್ರಮಾಣ ತೀರಾ ಕಡಿಮೆ ಇರುವುದು ವರದಿಗಳಿಂದ ತಿಳಿದುಬಂದಿದೆ.

ಸಾಕ್ಷ ರರಾದರೆ ಮಾತ್ರ ಅರಿವು ಹೆಚ್ಚಾಗಿ ಅಭಿವೃದ್ಧಿ ಬಗೆಗಿನ ಕಾಳಜಿ ಉಂಟಾಗಲಿದೆ. ಈ ಹಿನ್ನæ್ನಲೆಯಲ್ಲಿ ಪರಿಶಿಷ್ಟರ ಸಾಕ್ಷ ರತೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷ ಆಂದೋಲನವನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಬಗರ್‌ ಹುಕುಂ ಸಾಗುವಳಿ ಸಂಬಂಧ ಪ್ರಕರಣಗಳ ಬಗ್ಗೆ ಅರಣ್ಯ, ಕಂದಾಯ ಇಲಾಖೆ ವಹಿಸಬೇಕಿರುವ ಕ್ರಮಗಳ ಕುರಿತು ಸಭೆಯಲ್ಲಿ ತಿಳಿಸಲಾಗಿದೆ.

ಸ್ಮಶಾನ ಮಂಜೂರು, ಅಪೌಷ್ಟಿಕತೆ ನಿವಾರಣೆ, ಸುಳ್ಳು ಜಾತಿ ಪ್ರಮಾಣಪತ್ರ ಪ್ರಕರಣಗಳ ನಿರ್ವಹಣೆ, ಸುಳ್ವಾಡಿ ಪ್ರಕರಣ ಸೇರಿದಂತೆ ಪರಿಶಿಷ್ಟರ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ ''ವರವಾಗಿ ಪ್ರಗತಿ ಪರಿಶೀಲಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಸಮಿತಿ ಸದಸ್ಯರಾಗಿರುವ ಶಾಸಕರಾದ ಎನ್‌. ಮಹೇಶ್‌, ಬಸವರಾಜ್‌ ಮತ್ತಿಮೂಡ್‌, ಆರ್‌. ಪ್ರಸನ್ನಕುಮಾರ್‌, ಆರ್‌. ಧರ್ಮಸೇನಾ, ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌. ಆನಂದ್‌ಕುಮಾರ್‌ ಸೇರಿದಂತೆ ಇತರರು ಹಾಜರಿದ್ದರು.

ಸಭೆ: ಇದಕ್ಕೂ ಮುನ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಂಬಂಧ ನಾನಾ ಇಲಾಖೆಗಳ ಕಾರ್ಯಕ್ರಮ, ಯೋಜನೆ, ಅನುದಾನ ಬಳಕೆ, ಜಮೀನು ಪರಿಹಾರ, ಕೆಬ್ಬೆಕಟ್ಟೆ ಪ್ರಕರಣ ಸೇರಿದಂತೆ ನಾನಾ ವಿಷಯಗಳ ಕುರಿತು ಸಭೆ ನಡೆಯಿತು.

ಜಿಲ್ಲೆಯಲ್ಲಿ ಹೆಚ್ಚು ಪ್ರಕರಣ

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ ದಲಿತರ ಮೇಲಿನ 94 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಜಾಗೃತಿ ಹಾಗೂ ಸಾಮರಸ್ಯ ಕಾರ್ಯಕ್ರಮಗಳ ಮೂಲಕ ಇಂತಹ ದೌರ್ಜನ್ಯ ಪ್ರಕರಣಗಳು ಹೆಚ್ಚಾಗದಂತೆ ಸುಧಾರಿಸಬೇಕಿದೆ. ದಾಖಲಾಗಿರುವ ಪ್ರಕರಣಗಳ ಪæೖಕಿ 70 ಪ್ರಕರಣಗಳು ನ್ಯಾಯಾಲಯದ ವಿಚಾರಣೆ ಹಂತದಲ್ಲಿವೆ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪæäಲೀಸರು ವಹಿಸಬೇಕಿರುವ ಕ್ರಮಗಳಿಗೆ ಮುಂದಾಗುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಪೊಲೀಸರ ಉದಾಸೀನ: ಗುಂಡ್ಲುಪೇಟೆ ತಾಲೂಕಿನಲ್ಲಿ ನಡೆದ ಯುವಕನ ಬೆತ್ತಲೆ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಭೇಟಿ ನೀಡಿ ವಿವರ ಪಡೆದುಕೊಳ್ಳಲಾಗಿದೆ. ಜೂ. 3ರಂದು ಘಟನೆ ನಡೆದಿದ್ದರೂ ಜೂ. 10ರಂದು ಪ್ರಕರಣ ದಾಖಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳಿಂದ ಹಿಡಿದು ಕೆಳಹಂತದ ಅಧಿಕಾರಿವರೆಗೂ ಪ್ರಕರಣ ನಿರ್ವಹಣೆಯಲ್ಲಿ ಉದಾಸೀನ ತೋರಿರುವುದು ಗಮನಕ್ಕೆ ಬಂದಿದೆ. ಇನ್ನುಮುಂದೆ ಹೀಗೆ ನಡೆದುಕೊಳ್ಳದೇ ಅತ್ಯಂತ ಗಂಭೀರ ಹಾಗೂ ನಿಷ್ಪಕ್ಷ ವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ