ಚಾಮರಾಜನಗರ: ರಸ್ತೆ ಅಗಲೀಕರಣದ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದರೂ, ಚರಂಡಿಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಲೀಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶುಕ್ರವಾರ ಬೆಳಗ್ಗೆ ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಮಾಲೀಕರು ಜಿಲ್ಲಾಡಳಿತದ ವಿರುದ್ದ ಘೋಷಣೆಗಳನ್ನು ಕೂಗಿದರು.
ನಗರದ ಡಿವಿಯೇಷನ್ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕೆಲ ಮಾಲೀಕರು ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನ್ಯಾಯಾಲಯದಲ್ಲಿ ದಾವೆ ಹಾಕಿ, ಮೇಲ್ಮನವಿ ತಂದಿದ್ದಾರೆ. ಆದರೆ ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರು ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿ, ಕಾಮಗಾರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿದೆ, ದೂರು ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ' ನ್ಯಾಯಾಲಯದಿಂದ ಮೇಲ್ಮನವಿ ತಂದಿರುವ ಕಟ್ಟಡದ ಜಾಗದಲ್ಲಿ ಕಾಮಗಾರಿ ನಡೆಸುವ ಆಗಿದ್ದರೆ, ಜಿಲ್ಲಾಧಿಕಾರಿ ಅವರ ಅನುಮತಿ ಪಡೆಯಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಇನಾಯತ್ ಉಲ್ಲಾ, ಅಬೀಬ್ವುಲ್ಲಾ, ಸೈಮನ್ಡಿ ಸಿಲ್ವಾ, ಶ್ರೀನಿವಾಸ, ವಾಸೀಂ ಪಾಷಾ ಸೇರಿದಂತೆ ಪಾಲ್ಗೊಂಡಿದ್ದರು.