ಆ್ಯಪ್ನಗರ

ರೌಡಿ ಶೀಟರ್‌ ಗಡಿಪಾರು

ಪಟ್ಟಣದ ನಿವಾಸಿ ರೌಡಿ ಶೀಟರ್‌ ಪ್ರಜ್ವಲ್‌ ಎಂಬಾತನನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಚಿತ್ರದುರ್ಗ ನಗರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ.

Vijaya Karnataka 10 Apr 2019, 5:00 am
ಕೊಳ್ಳೇಗಾಲ: ಪಟ್ಟಣದ ನಿವಾಸಿ ರೌಡಿ ಶೀಟರ್‌ ಪ್ರಜ್ವಲ್‌ ಎಂಬಾತನನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಿಂದ ಚಿತ್ರದುರ್ಗ ನಗರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಆದೇಶ ಹೊರಡಿಸಿದ್ದಾರೆ.
Vijaya Karnataka Web rowdy sheater exiled
ರೌಡಿ ಶೀಟರ್‌ ಗಡಿಪಾರು


ಪಟ್ಟಣದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆ ನಿವಾಸಿಯಾದ ಪ್ರಜ್ವಲ್‌ ವಿರುದ್ಧ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿರುವ ಕಾರಣ ರೌಡಿ ಶೀಟ್‌ ತೆರೆಯಲಾಗಿತ್ತು. ಈ ನಡುವೆ ಪ್ರಜ್ವಲ್‌ ರಾಜಕೀಯ ಪಕ್ಷ ವೊಂದರ ಜತೆ ಗುರುತಿಸಿಕೊಂಡು ಸಕ್ರಿಯನಾಗಿದ್ದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಶಿಫಾರಸಿನ ಮೇರೆಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಈತನನ್ನು ಏ.7 ರಿಂದ ಮೇ23 ವರೆಗೆ ಚಿತ್ರದುರ್ಗ ಜಿಲ್ಲೆಯ ನಗರ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಈತ ಚಿತ್ರದುರ್ಗ ಪಟ್ಟಣ ಠಾಣೆ ಠಾಣಾಧಿಕಾರಿಗಳ ಮುಂದೆ ಬೆಳಗ್ಗೆ ಮತ್ತು ಸಂಜೆ ಹಾಜರಾಗಿ ಸಹಿ ಹಾಕುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ