ಆ್ಯಪ್ನಗರ

ಇಂದ್ರ ಧನುಷ್ ಅಭಿಯಾನಕ್ಕೆ ಚಾಲನೆ

ಗರ್ಭಿಣಿ ಮತ್ತು ಮಕ್ಕಳ ಮನೆ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋಗಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಪ್ಪದೇ ಮಿಷನ್ ಇಂದ್ರ ಧನುಷ್ ಲಸಿಕೆಯನ್ನು ನೀಡಲು ಆರೋಗ್ಯ ಇಲಾಖೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.

Vijaya Karnataka 2 Dec 2019, 9:22 pm
ಚಾಮರಾಜನಗರ: ಗರ್ಭಿಣಿ ಮತ್ತು ಮಕ್ಕಳ ಮನೆ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋಗಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಪ್ಪದೇ ಮಿಷನ್ ಇಂದ್ರ ಧನುಷ್ ಲಸಿಕೆಯನ್ನು ನೀಡಲು ಆರೋಗ್ಯ ಇಲಾಖೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ತಿಳಿಸಿದರು.
Vijaya Karnataka Web ಚಾಮರಾಜನಗರ ಗಾಳಿಪುರ ಬಡಾವಣೆಯಲ್ಲಿ ನಡೆದ ತೀವ್ರತರ ಮಿಷನ್ ಇಂದ್ರ ಧನುಷ್ ಲಸಿಕಾ ಅಭಿಯಾನವನ್ನು  ಮಕ್ಕಳಿಗೆ ಹನಿ ಹಾಕುವ ಮೂಲಕ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಉದ್ಘಾಟಿಸಿದರು.


ನಗರದ ಗಾಳಿಪುರ ಬಡಾವಣೆಯ ಟಿಪ್ಪು ಮಸೀದಿ ಬಳಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ’ತೀವ್ರತರ ಮಿಷನ್ ಇಂದ್ರ ಧನುಷ್ ಲಸಿಕಾ ಅಭಿಯಾನವನ್ನು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

‘‘ಲಸಿಕೆ ಕಾರ‌್ಯಕ್ರಮವು ಅತ್ಯಂತ ಮಹತ್ವದಾಗಿದ್ದು, ಆರೋಗ್ಯ ಕಾಳಜಿಯಿಂದ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ 158 ಮಕ್ಕಳು ಹಾಗೂ 18 ಗರ್ಭಿಣಿಯರಿಗೆ ಲಸಿಕೆ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದ್ದು, ಒಟ್ಟು 62 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ,’’ ಎಂದು ತಿಳಿಸಿದರು.

‘‘ಇದೇ ವೇಳೆ ಡೆಂಗ್ಯೂ, ಚಿಕೂನ್ ಗುನ್ಯ ಜಾಗತಿಗಾಗಿ ನಾಗರಿಕರಿಗೊಂದು ಸವಾಲು ಕಾರ‌್ಯಕ್ರಮಕ್ಕೂ ಚಾಲನೆ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಡೆಂಗೆ, ಚಿಕೂನ್ ಗುನ್ಯಾ ರೋಗಗಳು ಹೆಚ್ಚಾಗಿ ಕಂಡು ಹರಡುತ್ತಿರುವುದರಿಂದ ಮನೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛತೆಯಿಂದ ಕಾಪಾಡಬೇಕು. ನೀರಿನ ಸಂಗ್ರಹದ ತೊಟ್ಟಿಗಳನ್ನು ವಾರಕ್ಕೆ ಒಂದು ಬಾರಿ ತೊಳೆದು ಒಣಗಿಸಿ ಸ್ವಚ್ಛತೆಯನ್ನು ಕಾಪಾಡಿ ಮಕ್ಕಳಿಗೆ ಸೊಳ್ಳೆಗಳು ಕಚ್ಚದ ಹಾಗೇ ಗಮನಹರಿಸಬೇಕು,’’ ಎಂದು ಹೇಳಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎಚ್. ನಾರಾಯಣ್‌ರಾವ್ ಮಾತನಾಡಿ, ‘‘ಡೆಂಗೆ ಜ್ವರ ಬಾರದಂತೆ ಸ್ವಚ್ಛತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಗರ್ಭಿಣಿಯರು ಮತ್ತು ಮಕ್ಕಳು ತೀವ್ರತರ ಮಿಷನ್ ಇಂದ್ರ ಧನುಷ್ ಲಸಿಕೆಯನ್ನು ಪಡೆಯುವ ಮೂಲಕ ಲಸಿಕಾ ಕಾರ‌್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ,’’ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಆರ್‌ಸಿಎಚ್‌ಒ ಅಧಿಕಾರಿ ವಿಶ್ವೇಶ್ವರಯ್ಯ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜು, ನಗರಸಭಾ ಸದಸ್ಯ ಖಲೀಲ್ ಉಲ್ಲಾ, ಮುಖಂಡರಾದ ಸಯ್ಯದ್ ಖಲೀಮ್ ಉಲ್ಲಾ, ಅಮೀರ್ ಅಹಮ್ಮದ್ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ