ಆ್ಯಪ್ನಗರ

ಕಂಡಕ್ಟರ್‌ ನಿಂದಿಸಿದ ವ್ಯಕ್ತಿಗೆ ಜೈಲು ಶಿಕ್ಷೆ

ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಧೀಶರು 1 ವರ್ಷ ಜೈಲು ಶಿಕ್ಷೆ ಅಥವಾ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Vijaya Karnataka 8 Jun 2019, 5:00 am
ಗುಂಡ್ಲುಪೇಟೆ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಧೀಶರು 1 ವರ್ಷ ಜೈಲು ಶಿಕ್ಷೆ ಅಥವಾ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
Vijaya Karnataka Web sentenced to prison for person who has been charged with the conductor
ಕಂಡಕ್ಟರ್‌ ನಿಂದಿಸಿದ ವ್ಯಕ್ತಿಗೆ ಜೈಲು ಶಿಕ್ಷೆ


ಪಟ್ಟಣ ನಿವಾಸಿ ಆಟೋ ಚಾಲಕ ಆನಂದ್‌ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2008 ನ.05ರಂದು ಆರೋಪಿ ಆನಂದ್‌ ಬಸ್‌ ಓವರ್‌ಟೇಕ್‌ ಮಾಡಿ ಆಟೋ ಅಡ್ಡ ನಿಲ್ಲಿಸಿ ಚಾಲಕ ಶಿವಪ್ಪ ಎಂಬುವರನ್ನು ನಿಂದಿಸಿದ್ದಲ್ಲದೇ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಈ ಹಿನ್ನೆಲೆಯಲ್ಲಿ ಚಾಲಕ ಶಿವಪ್ಪರ ದೂರಿನ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಆಗಿದ್ದ ಧನರಾಜ್‌ ಆರೋಪಿ ವಿರುದ್ಧ ದೋಷಾರೋಪನಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಚಂದ್ರಶೇಖರ ಪಿ.ದಿಡ್ಡಿ ಆರೋಪಿಗೆ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಎ.ಎನ್‌.ರಾಜಣ್ಣ ವಾದ ಮಂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ