ಆ್ಯಪ್ನಗರ

ಆಷಾಢ ಶುಕ್ರವಾರ; ಕಾಳಿಕಾಂಬಗೆ ವಿಶೇಷ ಪೂಜೆ

ಕಾಳಮ್ಮನಗುಡಿ ಬೀದಿಯಲ್ಲಿರುವ ಕಾಳಿಕಾಂಬ ದೇವಸ್ಥಾನದಲ್ಲಿ ಆಷಾಢ ಶುಕ್ರವಾರದ ಅಂಗವಾಗಿ ಕಾಳಿಕಾಂಬ ಹಾಗೂ ಕಮಠೇಶ್ವರ ಸ್ವಾಮಿಗೆ ಹೂ ಆಲಂಕಾರದ ಜತೆ ...

Vijaya Karnataka Web 10 Jul 2016, 9:00 am

ಚಾಮರಾಜನಗರ: ಕಾಳಮ್ಮನಗುಡಿ ಬೀದಿಯಲ್ಲಿರುವ ಕಾಳಿಕಾಂಬ ದೇವಸ್ಥಾನದಲ್ಲಿ ಆಷಾಢ ಶುಕ್ರವಾರದ ಅಂಗವಾಗಿ ಕಾಳಿಕಾಂಬ ಹಾಗೂ ಕಮಠೇಶ್ವರ ಸ್ವಾಮಿಗೆ ಹೂ ಆಲಂಕಾರದ ಜತೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಬೆಳಗ್ಗೆಯಿಂದಲೇ ಕಾಳಿಕಾಂಬ , ಕಮಠೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು. ಮಹಿಳೆಯರು ನಿಂಬೆಹಣ್ಣಿನ ದೀಪವನ್ನು ಹಚ್ಚಿ ಪೂಜೆ ಸಲ್ಲಿಸಿದರು. ದೇವಿಗೆ ಪಂಚಾಮೃತ ಅಭಿಷೇಕ ಹಾಗೂ ಆಂಜನೇಯಸ್ವಾಮಿ, ಗಣಪತಿ ಮತ್ತು ಸುಬ್ರಹ್ಮಣ್ಯ ಸ್ವಾಮಿಗೂ ಪಂಚಾಮೃತ ಅಭಿಷೇಕ, ಕುಂಕುಮ ಅರ್ಚನೆ ಮಹಾಮಂಗಳಾರತಿ ನಡೆಯಿತು. ಸಂಜೆವೇಳೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾಳಿಕಾಂಬ ದೇವಿಯ ದರ್ಶನ ಪಡೆದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿರುವ ಚಾಮುಂಡೇಶ್ವರಿ ಹಾಗೂ ಕೆಂಪನಂಜಾಂಬ ಅಮ್ಮನವರಿಗೆ ಪೂಜೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ