ಆ್ಯಪ್ನಗರ

ರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ

ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಜಿಲ್ಲಾಘಟಕದ ವತಿಯಿಂದ ಸೆ.14ರಂದು ನಗರದ ನಂದಿ ಭವನದಲ್ಲಿರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಹಾಗೂ ಹಿಂದಿ ದಿವಸ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ನಾಗರಾಜ ಶರ್ಮನ್‌ ತಿಳಿಸಿದರು.

Vijaya Karnataka 11 Sep 2019, 5:00 am
ಚಾಮರಾಜನಗರ: ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಜಿಲ್ಲಾಘಟಕದ ವತಿಯಿಂದ ಸೆ.14ರಂದು ನಗರದ ನಂದಿ ಭವನದಲ್ಲಿರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ ಹಾಗೂ ಹಿಂದಿ ದಿವಸ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ನಾಗರಾಜ ಶರ್ಮನ್‌ ತಿಳಿಸಿದರು.
Vijaya Karnataka Web state level hindi language teachers educational conference
ರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನ


ಹಿಂದಿ ಭಾಷೆಯಲ್ಲಿಬದಲಾವಣೆ ಆಗಿರುವ ಪಠ್ಯಕ್ರಮದ ಸ್ವರೂಪ, ಹಿಂದಿ ಭಾಷಾ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವ ಹಿನ್ನೆಲೆಯಲ್ಲಿಕಾರ್ಯಕ್ರಮ ಆಯೋಜಿಸಲಾಗಿದೆ, 1949 ಸೆ.14ರಂದು ಹಿಂದಿಯನ್ನು ಆಡಳಿತ ಭಾಷೆಯಾಗಿ ಆಚರಣೆ ತಂದ ಹಿನ್ನೆಲೆಯಲ್ಲಿಅಂದು ಹಿಂದಿ ದಿವಸ್‌ ಕಾರ್ಯಕ್ರಮದ ಆಚರಣೆಯೂ ನಡೆಯಲಿದೆ ಎಂದು ಮಂಗಳವಾರ ನಗರದಲ್ಲಿನಡೆದ ಸುದ್ದಿಗೋಷ್ಠಿಯಲ್ಲಿಹೇಳಿದರು.

ಅಂದು ಬೆಳಗ್ಗೆ 10ಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಕಾರ್ಯಕ್ರಮ ಉದ್ಘಾಟಿಸುವರು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌, ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌, ಹನೂರು ಶಾಸಕ ಆರ್‌.ನರೇಂದ್ರ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರುಗದ ಮಣಿ, ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಎಸ್ಪಿ ಎಚ್‌.ಡಿ.ಆನಂದ್‌ಕುಮಾರ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಗೀತಾಂಬ, ಚಾಮರಾಜನಗರ(ಪ್ರಭಾರ) ಡಿಡಿಪಿಐ ಪಿ.ಮಂಜುನಾಥ್‌ ಸೇರಿದಂತೆ ಜಿಲ್ಲೆಯ ನಾಲ್ಕು ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.

ನಿವೃತ್ತ ಹಿಂದಿ ಪ್ರಾಧ್ಯಾಪಕ ಡಾ.ಟಿ.ಜಿ.ಪ್ರಭಾಶಂಕರ್‌ ವಿಶೇಷ ಉಪನ್ಯಾಸ ನೀಡಲಿದ್ದಾರೆ, ಮಧ್ಯಾಹ್ನ 2.30ಕ್ಕೆ ನಡೆಯುವ ಶೈಕ್ಷಣಿಕ ಕಾರ್ಯಾಗಾರದ ಅಧ್ಯಕ್ಷತೆಯನ್ನು ಹಿಂದಿ ಭಾಷಾ ಶಿಕ್ಷಕರ ರಾಜ್ಯಾಧ್ಯಕ್ಷ ಎ.ರಾಜಾಗೋಪಾಲಚಾರ್‌ ವಹಿಸುವರು. ರಾಜ್ಯ ಸಂಪನ್ಮೂಲ ವ್ಯಕ್ತಿ ಮಹೇಶ್‌ ಪಾಟೀಲ್‌ ಕಾರ್ಯಾಗಾರ ನಡೆಸಿಕೊಡುವರು ಎಂದರು. ಜಿಲ್ಲೆಯ ಎಲ್ಲಪ್ರಾಥಮಿಕ ಹಾಗೂ ಪ್ರೌಡಶಾಲಾ ಹಿಂದಿ ಶಿಕ್ಷಕರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಶೈಕ್ಷಣಿಕ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿಪ್ರಧಾನ ಕಾರ್ಯದರ್ಶಿ ಎನ್‌.ಮಹದೇವ, ರಾಜ್ಯ ಪ್ರತಿನಿಧಿ ಅರುಣ್‌ ಕುಮಾರ್‌, ಹನೂರು ತಾಲೂಕು ಉಪಾಧ್ಯಕ್ಷ ಕೃಷ್ಣ,

ತಾಲೂಕು ಅಧ್ಯಕ್ಷ ಪ್ರಸನ್ನ ಕುಮಾರ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ