ಚಾಮರಾಜನಗರ: ನಗರದ ರಂಗತರಂಗ ಟ್ರಸ್ಟ್ ವತಿಯಿಂದ ಮೈಸೂರಿನ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಡಿ.9ರಂದು 20ನೇ ರಾಜ್ಯಮಟ್ಟದ ಭಾವಗೀತೆ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಭಾವಗೀತೆ ಸ್ಪರ್ಧೆ ನಡೆಯಲಿದ್ದು, ಸಂಜೆ 4ಕ್ಕೆ ನಡೆಯುವ ಬಹುಮಾನ ವಿತರಣೆ ಸಮಾರಂಭವನ್ನು ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ಉದ್ಘಾಟಿಸುವರು. ಮೈಸೂರು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರುಚನ್ನಪ್ಪ, ತೀರ್ಪುಗಾರರಾಗಿ ಜಿ.ಕವಿತಾಕಾಮತ್, ಜಿ.ಆನಂದ್ ಕುಮಾರ್ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗತರಂಗ ಟ್ರಸ್ಟ್ ಅಧ್ಯಕ್ಷ ಸೋಮಶೇಖರ್ ಬಿಸಲ್ವಾಡಿ ವಹಿಸಲಿದ್ದಾರೆ.
ರಾಜ್ಯಮಟ್ಟದ ಭಾವಗೀತೆ ಸ್ಪರ್ಧೆ ನಾಳೆ
ನಗರದ ರಂಗತರಂಗ ಟ್ರಸ್ಟ್ ವತಿಯಿಂದ ಮೈಸೂರಿನ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಡಿ9ರಂದು 20ನೇ ರಾಜ್ಯಮಟ್ಟದ ಭಾವಗೀತೆ ಸ್ಪರ್ಧೆ ನಡೆಯಲಿದೆ ಬೆಳಗ್ಗೆ 10...
Vijaya Karnataka 8 Dec 2018, 5:00 am