ಆ್ಯಪ್ನಗರ

ಶಾಲಾ ವಾಹನ ಹರಿದು ವಿದ್ಯಾರ್ಥಿ ಸಾವು

ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209ರ ರಸ್ತೆ ಬಳಿ ಶುಕ್ರವಾರ ಶಾಲಾ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ...

Vijaya Karnataka Web 25 Nov 2018, 5:00 am
ಯಳಂದೂರು: ಪಟ್ಟಣದ ರಾಷ್ಟ್ರೀಯ ಹೆದ್ದಾರಿ 209ರ ರಸ್ತೆ ಬಳಿ ಶುಕ್ರವಾರ ಶಾಲಾ ವಾಹನವೊಂದು ಡಿಕ್ಕಿ ಹೊಡೆದಿದ್ದರಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪಟ್ಟಣದ ರವಿ ಎಂಬುವವರ ಮಗ ಯಶ್ವಂತ್‌(9)ಮೃತ ದುರ್ದೈವಿ. ಶಾಲಾ ವಿದ್ಯಾರ್ಥಿಗಳನ್ನು ತುಂಬಿಕೊಂಡು ಮಾರುತಿ ಒಮ್ನಿ ವಾಹನ ತೆರಳುತಿದ್ದಾಗ ರಸ್ತೆಗೆ ಯಶ್ವಂತ್‌ ಅಡ್ಡಲಾಗಿ ಬಂದಿದ್ದಾನೆ. ವಾಹನ ನಿಯಂತ್ರಿಸಲು ಸಾಧ್ಯವಾಗದೆ ಡಿಕ್ಕಿ ಹೊಡೆದು ಬಾಲಕನ ಮೇಲೆ ವಾಹನ ಹರಿದಿದೆ. ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಯಶ್ವಂತ್‌ನನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಶನಿವಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಯಿತು.
Vijaya Karnataka Web student killed in school bus accident
ಶಾಲಾ ವಾಹನ ಹರಿದು ವಿದ್ಯಾರ್ಥಿ ಸಾವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ