ಕೊಳ್ಳೇಗಾಲ : ಸುಳವಾಡಿ ವಿಷಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಪಟ್ಟಣದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ ಜ. 16ರವರೆಗೂ ವಿಸ್ತರಿಸಿದೆ.
ಗುರುವಾರ ಆರೋಪಿಗಳನ್ನು ಮೈಸೂರಿನ ಕಾರಾಗೃಹದಿಂದ ಕರೆತಂದು ಪಟ್ಟಣದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ಅವರ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಗಳನ್ನು ಜ. 16ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
ಸುಳವಾಡಿ ಮಾರಮ್ಮ ವಿಷಪ್ರಸಾದ ದುರಂತ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರನ್ನು ಗುರುವಾರ ಬೆಳಗ್ಗೆ ಸುಮಾರು 11.30ಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಆರೋಪಿಗಳನ್ನು ಉದ್ದೇಶಿಸಿ ನ್ಯಾಯಾಧೀಶರು,'ನಿಮ್ಮ ಪರ ವಕಾಲತ್ತು ಮಾಡಲು ಯಾರಾದರು ವಕೀಲರಿದ್ದಾರೆಯೇ' ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ, 'ಯಾರು ಇಲ್ಲ,'ಎಂದು ಪ್ರತಿಕ್ರಿಯಿಸಿದರು. ಹೀಗಾಗಿ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು 16ರವರೆಗೆ ವಿಸ್ತರಿಸಿ ಆದೇಶಿಸಿದರು. ನಂತರ ಪೊಲೀಸರು ನಾಲ್ವರು ಆರೋಪಿಗಳನ್ನು ಮೈಸೂರಿನ ಕಾರಾಗೃಹಕ್ಕೆ ಕರೆದೊಯ್ದರು.
ಕಾವಿ ಬದಲು ಬಿಳಿ ಉಡುಪು: ಇಮ್ಮಡಿ ಮಹದೇವಸ್ವಾಮಿಯವರ ಕಾವಿಯನ್ನು ಕಳಚಿ ಬಿಳಿ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕರೆತರಲಾಗಿತ್ತು. ಆರೋಪಿಗಳನ್ನು ನೋಡಲು ಜನ ಮುಗಿ ಬಿದ್ದರಲ್ಲದೆ, ಆಕ್ರೋಶವನ್ನೂ ವ್ಯಕ್ತಪಡಿಸಿದರು. ಕೆಲವರು ಚೀ ಥೂ..ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಡಿ.14 ರಂದು ನಡೆದ ಕಾರ್ಯಕ್ರಮದಲ್ಲಿ ತಯಾರಾಗಿದ್ದ ಪ್ರಸಾದಕ್ಕೆ ಕೀಟನಾಶಕ ಮಿಶ್ರಣ ಮಾಡಿದ್ದರಿಂದ ಅದನ್ನು ಸೇವಿಸಿದ್ದವರ ಪೈಕಿ 17 ಮಂದಿ ಮೃತಪಟ್ಟಿದ್ದರು, ನೂರಾರು ಮಂದಿ ಅಸ್ವಸ್ಥಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿದ ಪೊಲೀಸರು, ಡಿ.19 ರಂದು ಈ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.
ಗುರುವಾರ ಆರೋಪಿಗಳನ್ನು ಮೈಸೂರಿನ ಕಾರಾಗೃಹದಿಂದ ಕರೆತಂದು ಪಟ್ಟಣದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ಅವರ ಮುಂದೆ ಹಾಜರುಪಡಿಸಲಾಯಿತು.
ನ್ಯಾಯಾಧೀಶರು ಆರೋಪಿಗಳನ್ನು ಜ. 16ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
ಸುಳವಾಡಿ ಮಾರಮ್ಮ ವಿಷಪ್ರಸಾದ ದುರಂತ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರನ್ನು ಗುರುವಾರ ಬೆಳಗ್ಗೆ ಸುಮಾರು 11.30ಕ್ಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಆರೋಪಿಗಳನ್ನು ಉದ್ದೇಶಿಸಿ ನ್ಯಾಯಾಧೀಶರು,'ನಿಮ್ಮ ಪರ ವಕಾಲತ್ತು ಮಾಡಲು ಯಾರಾದರು ವಕೀಲರಿದ್ದಾರೆಯೇ' ಎಂದು ಪ್ರಶ್ನಿಸಿದರು.
ಇದಕ್ಕೆ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ, 'ಯಾರು ಇಲ್ಲ,'ಎಂದು ಪ್ರತಿಕ್ರಿಯಿಸಿದರು. ಹೀಗಾಗಿ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು 16ರವರೆಗೆ ವಿಸ್ತರಿಸಿ ಆದೇಶಿಸಿದರು. ನಂತರ ಪೊಲೀಸರು ನಾಲ್ವರು ಆರೋಪಿಗಳನ್ನು ಮೈಸೂರಿನ ಕಾರಾಗೃಹಕ್ಕೆ ಕರೆದೊಯ್ದರು.
ಕಾವಿ ಬದಲು ಬಿಳಿ ಉಡುಪು: ಇಮ್ಮಡಿ ಮಹದೇವಸ್ವಾಮಿಯವರ ಕಾವಿಯನ್ನು ಕಳಚಿ ಬಿಳಿ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕರೆತರಲಾಗಿತ್ತು. ಆರೋಪಿಗಳನ್ನು ನೋಡಲು ಜನ ಮುಗಿ ಬಿದ್ದರಲ್ಲದೆ, ಆಕ್ರೋಶವನ್ನೂ ವ್ಯಕ್ತಪಡಿಸಿದರು. ಕೆಲವರು ಚೀ ಥೂ..ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಡಿ.14 ರಂದು ನಡೆದ ಕಾರ್ಯಕ್ರಮದಲ್ಲಿ ತಯಾರಾಗಿದ್ದ ಪ್ರಸಾದಕ್ಕೆ ಕೀಟನಾಶಕ ಮಿಶ್ರಣ ಮಾಡಿದ್ದರಿಂದ ಅದನ್ನು ಸೇವಿಸಿದ್ದವರ ಪೈಕಿ 17 ಮಂದಿ ಮೃತಪಟ್ಟಿದ್ದರು, ನೂರಾರು ಮಂದಿ ಅಸ್ವಸ್ಥಗೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸಿದ ಪೊಲೀಸರು, ಡಿ.19 ರಂದು ಈ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.