ಆ್ಯಪ್ನಗರ

ಸುಳವಾಡಿ ಪ್ರಕರಣ: ವಿಚಾರಣೆ ಮತ್ತೆ ಮುಂದಕ್ಕೆ

ಜಿಲ್ಲೆಯ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳ ವಿಚಾರಣೆಯನ್ನು ನಗರದ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆ.19ಕ್ಕೆ ಮುಂದೂಡಿದೆ.

Vijaya Karnataka 6 Aug 2019, 5:00 am
ಚಾಮರಾಜನಗರ : ಜಿಲ್ಲೆಯ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳ ವಿಚಾರಣೆಯನ್ನು ನಗರದ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಆ.19ಕ್ಕೆ ಮುಂದೂಡಿದೆ.
Vijaya Karnataka Web sulawadi case inquiry
ಸುಳವಾಡಿ ಪ್ರಕರಣ: ವಿಚಾರಣೆ ಮತ್ತೆ ಮುಂದಕ್ಕೆ


ಆರೋಪಿಗಳನ್ನು ಮೈಸೂರು ಕಾರಾಗೃಹದಿಂದ ಸೋಮವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಇಮ್ಮಡಿ ಸ್ವಾಮೀಜಿ ಪರ ವಕೀಲರಾದ ವಿಶ್ವನಾಥ್‌, ತಮ್ಮ ಕಕ್ಷಿದಾರರ ಮೇಲಿನ ಮೊಕದ್ದಮೆಯನ್ನು ರದ್ದುಪಡಿಸಬೇಕೆಂದು ಅರ್ಜಿ ಸಲ್ಲಿಸಿದರು. ಆದರೆ, ಇದಕ್ಕೆ ಸರಕಾರಿ ಅಭಿಯೋಜಕರಾದ ಲೋಲಾಕ್ಷಿ ಅವರು ಆಕ್ಷೇಪಿಸಿದರು. ಹೀಗಾಗಿ ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು, ಸರಕಾರಿ ಅಭಿಯೋಜಕರಿಗೆ ಸೂಚನೆ ನೀಡಿದರು.

ಉಳಿದ ಮೂವರು ಆರೋಪಿಗಳಾದ ಮಾದೇಶ, ಅಂಬಿಕಾ ಹಾಗೂ ದೊಡ್ಡಯ್ಯ ಪರ ವಕೀಲರು, ನ್ಯಾಯಾಲಯಕ್ಕೆ ಬಂದಿರಲಿಲ್ಲ. ಹೀಗಾಗಿ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ