ಆ್ಯಪ್ನಗರ

ಸುಳವಾಡಿ ಪ್ರಕರಣ: ವಿಚಾರಣೆ ಮತ್ತೆ ಮುಂದಕ್ಕೆ

ಹನೂರು ತಾಲೂಕಿನ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆಯನ್ನು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜೂ. 25ಕ್ಕೆ ಮುಂದೂಡಿತು.

Vijaya Karnataka 5 Jun 2019, 5:00 am
ಚಾಮರಾಜನಗರ: ಹನೂರು ತಾಲೂಕಿನ ಸುಳವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿಚಾರಣೆಯನ್ನು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಜೂ. 25ಕ್ಕೆ ಮುಂದೂಡಿತು.
Vijaya Karnataka Web sullivadi case inquiry again postpone
ಸುಳವಾಡಿ ಪ್ರಕರಣ: ವಿಚಾರಣೆ ಮತ್ತೆ ಮುಂದಕ್ಕೆ


ಮಂಗಳವಾರ ಪ್ರಕರಣದ ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ಮಾದೇಶ ಹಾಗೂ ದೊಡ್ಡಯ್ಯ ಅವರನ್ನು ಪೊಲೀಸರು ಜಿಲ್ಲಾ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಜಿ. ಬಸವರಾಜ ಅವರ ಮುಂದೆ ಹಾಜರುಪಡಿಸಲಾಯಿತು. ಈ ಬಾರಿಯೂ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಹೀಗಾಗಿ ನ್ಯಾಯಾಧೀಶರು, ನೀವು ಬೇಗ ವಕೀಲರನ್ನು ನೇಮಕ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸರಕಾರಿ ವಕೀಲರನ್ನು ನೇಮಿಸಲಾಗುವುದು ಎಂದು ಹೇಳಿದರಲ್ಲದೇ ವಿಚಾರಣೆಯನ್ನು ಮುಂದೂಡಿದರು.

ಸುಳವಾಡಿಯಲ್ಲಿ ಕಳೆದ ಡಿ. 14 ರಂದು ವಿಷ ಪ್ರಸಾದ ದುರ್ಘಟನೆ ನಡೆದಿದ್ದು, ಈ ಪ್ರಕರಣದಲ್ಲಿ ಡಿ.19 ರಂದು ಬಂಧಿತರಾಗಿರುವ ನಾಲ್ವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ