ಆ್ಯಪ್ನಗರ

ಗುಂಡ್ಲುಪೇಟೆಯಲ್ಲಿ ವಿಜಯೋತ್ಸವ

ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಭಾರತ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

Vijaya Karnataka 27 Feb 2019, 5:00 am
ಗುಂಡ್ಲುಪೇಟೆ: ಪುಲ್ವಾಮ ದಾಳಿಗೆ ಪ್ರತಿಕಾರವಾಗಿ ಭಾರತ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.
Vijaya Karnataka Web CHN-CHN26GPT4


ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಪಕ್ಷ ದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮಾತನಾಡಿ ಉಗ್ರರ ದುಷ್ಕೃತ್ಯಕ್ಕೆ 40ಕ್ಕೂ ಹೆಚ್ಚು ಮಂದಿ ವೀರಯೋಧರನ್ನು ಬಲಿಯಾದ ಪರಿಣಾಮ ಎಲ್ಲಾ ಭಾರತೀಯ ರಕ್ತ ಕುದಿಯುವಂತಾಗಿತ್ತು. ಇದರಿಂದ ಪ್ರತಿಕಾರ ಎಲ್ಲರ ಒತ್ತಾಯವಾಗಿತ್ತು. ಆದರೆ ನರೇಂದ್ರ ಮೋದಿಯವರ ರಕ್ಷ ಣಾ ಇಲಾಖೆಗೆ ನೀಡಿದ ಸ್ವಾತಂತ್ರ್ಯದ ಫಲವಾಗಿ ಇಂದು ಪಾಕೀಸ್ಥಾನದ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ನಡೆದು ನೂರಾರು ಉಗ್ರರು ಜೀವತೆತ್ತಿದ್ದಾರೆ. ಆದ್ದರಿಂದ ಸರ್ಜಿಕಲ್‌ ಸ್ಟ್ರೈಕ್‌ ಭಾರತದ ಪಾಲಿಗೆ, ಸೈನಿಕರ ಕುಟುಂಬಕ್ಕೆ ಮತ್ತು ಪ್ರತಿಯೊಬ್ಬ ಭಾರತೀಯನು ಖುಷಿ ಪಡುವ ದಿನ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಸಕ ಸಿ.ಎಸ್‌.ನಿರಂಜನ್‌ಕುಮಾರ್‌, ಪಕ್ಷ ದ ರಾಜ್ಯ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ಗೌಡ, ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿ ರಾಜೇಂದ್ರ, ಮಂಡಲ ಅಧ್ಯಕ್ಷ ಎನ್‌.ಮಲ್ಲೇಶ್‌, ಪುರಸಭೆ ಅಧ್ಯಕ್ಷ ಪಿ.ಗಿರೀಶ್‌, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರಣಯ್‌, ತಾಲೂಕು ಅಧ್ಯಕ್ಷ ಬಿ.ಎಂ.ನಂದೀಶ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ